ಬೆಂಗಳೂರು: ಜವಾಹರ್ ಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಹೆಸರಿನಲ್ಲಿ ಹಣ ಆಸ್ತಿ ಮಾಡಿಕೊಂಡಿದ್ದೇವೆ, ಈಗ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಋಣ ತೀರಿಸುವ ಸಂದರ್ಭ ಬಂದಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ರಮೇಶ್ ಕುಮಾರ್ ಅವರು ‘ನೆಹರು, ಇಂದಿರಾ ಹೆಸ್ರಲ್ಲಿ ಹಣ-ಆಸ್ತಿ ಮಾಡಿಕೊಂಡಿದ್ದೇವೆ, ಮೂರ್ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಋಣ ತೀರಿಸೋ ಸಂದರ್ಭ ಬಂದಿದೆ. ಅವರ ಋಣ ತೀರಿಸದೇ ಇದ್ರೆ ತಿನ್ನೋ ಅನ್ನಕ್ಕೆ ಹುಳ ಬೀಳುತ್ತೆ’ ಎಂದು ತಿಳಿಸಿದ್ಧಾರೆ.
ಸೋನಿಯಾ, ರಾಹುಲ್ ಗಾಂಧಿ ಶಕ್ತಿ ಮುಂದೆ ನಾವೆಲ್ಲಾ ಶೂನ್ಯ, ನೆಹರು, ಇಂದಿರಾ, ರಾಜೀವ್ ಗಾಂಧಿ ಹೆಸರಲ್ಲಿ ಸಾಕಷ್ಟು ಮಾಡಿಕೊಂಡಿದ್ದೇವೆ, ನಾವೆಲ್ಲಾ ಗಾಂಧಿ ಕುಟುಂಬದ ಪರವಾಗಿ ಹೋರಾಡೋಣ. ಗಾಂಧಿ ಕುಟುಂಬದ ಋಣಸಂದಾಯಕ್ಕೆ ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರತಿಭಟನೆಯಲ್ಲಿ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…