Featured

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇ.ಡಿ ನೋಟಿಸ್ : ಬೆಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ – ಯು.ಟಿ ಖಾದರ್ ಆಕ್ರೋಶ

ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ಜೊತೆಗಿದ್ದಾರೆ..

ಗಾಂಧಿ ಕುಟುಂಬ ಈ‌ ದೇಶಕ್ಕೆ ತ್ಯಾಗ ಸೇವೆ ಮಾಡಿದೆ..

ಡಬಲ್ ಇಂಜಿನ್ ಸರ್ಕಾರ ಆಡಳಿತ ಮಾಡುವಲ್ಲಿ ವಿಫಲ..

ಬೆಂಗಳೂರು: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇ.ಡಿ ನೋಟಿಸ್ ಕೊಡಿಸುವ ಮೂಲಕ ಬೆಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಇ.ಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಅಧಿಕಾರ ದುರುಪಯೋಗ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ ಬಿಜೆಪಿ. ಯಾವುದೇ ವಿಷಯ ಇಲ್ಲದಿದ್ದರೂ ತನಿಖೆಗೆ ಕರೆಯುತ್ತಿದೆ. ದ್ವೇಷದ ರಾಜಕೀಯ ಜನ ಸಹಿಸಲ್ಲ, ಸೋನಿಯಾ ರಾಹುಲ್ ಕ್ಲೀನ್ ಚಿಟ್ ಪಡೆದುಕೊಂಡು ಬರುತ್ತಾರೆ ಎಂದರು. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ಜೊತೆಗಿದ್ದಾರೆ ಎಂದರು.‌

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸತ್ಯಕ್ಕೆ ಜಯ ಸಿಗುತ್ತದೆ. ಗಾಂಧಿ ಕುಟುಂಬ ಈ‌ ದೇಶಕ್ಕೆ ತ್ಯಾಗ ಸೇವೆ ಮಾಡಿದೆ. ‌ಹಾಗಿದ್ದರೂ‌ ಈ ಪರಿವಾರಕ್ಕೆ ಕಿರುಕುಳ ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ರೋಸಿ ಹೊಗಿದ್ದಾರೆ ಎಂದು ಕಿಡಿಕಾರಿದರು.

ಯಾವುದೇ ನಯ ಪೈಸೆ ಗಾಂಧಿ ಕುಟುಂಬಕ್ಕೆ ಹೋಗಿಲ್ಲ.ಆದರೂ ಜನರಿಗೆ ಮೋಸ ಮಾಡುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಪತ್ರಿಕೆ ಉಳಿಸಲು‌ ನಷ್ಟದಲ್ಲಿರುವಾಗ ಗಾಂಧಿ ಕುಟುಂಬ ಮಧ್ಯ ಪ್ರವೇಶ ಮಾಡಿದೆ. ಮಾನಸಿಕ ಕಿರುಕುಳ ನಿಡುವ ಉದ್ದೇಶದಿಂದ ಸುಳ್ಳು ಕೇಸ್ ಹಾಕಲಾಗಿದೆ ಎಂದರು.

ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಆಡಳಿತ ಮಾಡುವಲ್ಲಿ ವಿಫಲವಾಗಿದೆ. ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವ ನಿಟ್ಟಿನಲ್ಲಿ ಹಾಗೂ ಅವರ ಆತ್ಮಸ್ಥೈರ್ಯ ಕುಗ್ಗಿಸುವ ನಿಟ್ಟಿನಲ್ಲಿ ನೋಟಿಸ್ ನೀಡಲಾಗಿದೆ. ಅಕ್ರಮ ಹಣ ಎಲ್ಲಿ ವರ್ಗಾವಣೆ ಆಗಿದೆ? ಇ.ಡಿ ಕೇಂದ್ರದ ಕೈಗೊಂಬೆಯಾಗಿದೆ ಎಂದು ಆರೋಪಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

3 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago