ನವದೆಹಲಿ: ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ರವರು ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಹಾಗೂ ಸೋನು ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸೋನು ಸೂದ್ರವರು ನಮ್ಮ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸೋನು ಸೂದ್, ಇಂದು ನನಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ದೊರೆತಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದಕ್ಕಿಂತ ದೊಡ್ಡ ಸೇವೆ ಮತ್ತೊಂದಿಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಸೇವೆ ಮಾಡಬಹುದು ಮತ್ತು ನಾವೆಲ್ಲರೂ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಲಾಕ್ಡೌನ್ ವೇಳೆ, ನಾವು ಸಾಕಷ್ಟು ಜನರೊಂದಿಗೆ ಬೆರೆತೆವು. ಆಗ ಶಿಕ್ಷಣವು ಒಂದು ದೊಡ್ಡ ಸಮಸ್ಯೆಯಾಗಿರುವುದರ ಬಗ್ಗೆ ತಿಳಿದುಕೊಂಡೆವು. ಆದರೆ ಈ ಮಧ್ಯೆ ಮುಂದೆ ಏನು ಮಾಡಬೇಕೆಂದು ಮಕ್ಕಳಿಗೆ ತಿಳಿಯದೇ ದೊಡ್ಡ ಪ್ರಶ್ನೆಯಾಗಿದೆ. ನೀವು ಮಕ್ಕಳಿಗೆ ಶಿಕ್ಷಣ ನೀಡುತ್ತೀರಾ. ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವವರು ಕೂಡ ಇರಬೇಕು ಎಂದು ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…