ನವದೆಹಲಿ: ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ರವರು ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಹಾಗೂ ಸೋನು ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸೋನು ಸೂದ್ರವರು ನಮ್ಮ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸೋನು ಸೂದ್, ಇಂದು ನನಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ದೊರೆತಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದಕ್ಕಿಂತ ದೊಡ್ಡ ಸೇವೆ ಮತ್ತೊಂದಿಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಸೇವೆ ಮಾಡಬಹುದು ಮತ್ತು ನಾವೆಲ್ಲರೂ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಲಾಕ್ಡೌನ್ ವೇಳೆ, ನಾವು ಸಾಕಷ್ಟು ಜನರೊಂದಿಗೆ ಬೆರೆತೆವು. ಆಗ ಶಿಕ್ಷಣವು ಒಂದು ದೊಡ್ಡ ಸಮಸ್ಯೆಯಾಗಿರುವುದರ ಬಗ್ಗೆ ತಿಳಿದುಕೊಂಡೆವು. ಆದರೆ ಈ ಮಧ್ಯೆ ಮುಂದೆ ಏನು ಮಾಡಬೇಕೆಂದು ಮಕ್ಕಳಿಗೆ ತಿಳಿಯದೇ ದೊಡ್ಡ ಪ್ರಶ್ನೆಯಾಗಿದೆ. ನೀವು ಮಕ್ಕಳಿಗೆ ಶಿಕ್ಷಣ ನೀಡುತ್ತೀರಾ. ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವವರು ಕೂಡ ಇರಬೇಕು ಎಂದು ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…