Featured

ಸೋನು ಸೂದ್ ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್: ಅರವಿಂದ್ ಕೇಜ್ರಿವಾಲ್ -Vishwanews24

ಸೋನು ಸೂದ್ ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್: ಅರವಿಂದ್ ಕೇಜ್ರಿವಾಲ್ -Vishwanews24

ನವದೆಹಲಿ: ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್‍ರವರು ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಹಾಗೂ ಸೋನು ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸೋನು ಸೂದ್‍ರವರು ನಮ್ಮ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸೋನು ಸೂದ್, ಇಂದು ನನಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ದೊರೆತಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದಕ್ಕಿಂತ ದೊಡ್ಡ ಸೇವೆ ಮತ್ತೊಂದಿಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಸೇವೆ ಮಾಡಬಹುದು ಮತ್ತು ನಾವೆಲ್ಲರೂ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಲಾಕ್‍ಡೌನ್ ವೇಳೆ, ನಾವು ಸಾಕಷ್ಟು ಜನರೊಂದಿಗೆ ಬೆರೆತೆವು. ಆಗ ಶಿಕ್ಷಣವು ಒಂದು ದೊಡ್ಡ ಸಮಸ್ಯೆಯಾಗಿರುವುದರ ಬಗ್ಗೆ ತಿಳಿದುಕೊಂಡೆವು. ಆದರೆ ಈ ಮಧ್ಯೆ ಮುಂದೆ ಏನು ಮಾಡಬೇಕೆಂದು ಮಕ್ಕಳಿಗೆ ತಿಳಿಯದೇ ದೊಡ್ಡ ಪ್ರಶ್ನೆಯಾಗಿದೆ. ನೀವು ಮಕ್ಕಳಿಗೆ ಶಿಕ್ಷಣ ನೀಡುತ್ತೀರಾ. ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವವರು ಕೂಡ ಇರಬೇಕು ಎಂದು ತಿಳಿಸಿದ್ದಾರೆ.

 

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

17 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

17 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

17 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

18 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

18 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

18 hours ago