ಯಾದಗಿರಿ: ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ, ಇರುತ್ತಾರೆ ಕೂಡಾ. ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುತ್ತೇನೆ. ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಾಗಳಿಗೆ ತೆರೆ ಎಳೆದರು. ಮಾಡಾಳ್ ವಿರೂಪಾಕ್ಷ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ. ಅದ್ದೂರಿ ಮೆರವಣಿಗೆ ಬಗ್ಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಒಟ್ಟಿನಲ್ಲಿ ಅವರಿಗೆ ಕೋರ್ಟಿನಿಂದ (Court) ರಿಲೀಫ್ ಸಿಕ್ಕಿದೆ. ಮಾಡಾಳ್ ಅವರ ಮೇಲೆ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.
ಮೋದಿ, ಅಮಿತ್ ಶಾ ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ, ಈ ರೀತಿ ಮಾತನಾಡುವುದು ಅವರ ಸ್ವಭಾವ. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಟೀಕೆ ಮಾಡಲು ಇಷ್ಟಪಡುವುದಿಲ್ಲ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…