ಸೋಮವಾರ ರಾಶಿ ಭವಿಷ್ಯ ಇಲ್ಲಿದೆ ನೋಡಿ: vishwanews24

ಮೇಷ ರಾಶಿ
ಸಂಗಾತಿ ಜತೆಗೆ ಪ್ರವಾಸ, ಸುಂದರ ಕ್ಷಣ ಕಳೆಯುವ ಅವಕಾಶ ನಿಮ್ಮದಾಗಲಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ಸಂತಸಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಬಂಧು ಮಿತ್ರರ ಮನೆಗೆ ಭೇಟಿ ನೀಡುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ವೃಷಭ ರಾಶಿ:
ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿ ಬರಲಿವೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ಮಾಡುವರು. ಅಪರಿಚಿತರನ್ನು ನಂಬಿ ಹೂಡಿಕೆ ಮಾಡುವ ಮುನ್ನ ಎಚ್ಚರವಾಗಿರಿ.

ಮಿಥುನ ರಾಶಿ:
ಕುಲದೇವರ ಹರಕೆ ತೀರಿಸಲು ಮುಂದಾಗುವಿರಿ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ತಾಳ್ಮೆಯಿಂದಿರುವುದು ಮುಖ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು.

ಕರ್ಕಟಕ ರಾಶಿ:
ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ಹೆಚ್ಚುವುದು. ಕಷ್ಟದಲ್ಲಿರುವವರಿಗೆ ನೆರವಾಗುವಿರಿ. ಮಾನಸಿಕ ದುಗುಡಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವುದರಿಂದ ಮನಸ್ಸು ಹಗುರವಾಗುವುದು. ಗೃಹೋಪಯೋಗಿ ವಸ್ತುಗಳಿಗೆ ಧನವ್ಯಯವಾಗುವುದು.

ಸಿಂಹ ರಾಶಿ:
ದೈವಾನುಕೂಲದಿಂದ ಇಂದು ನೀವು ಕೈ ಹಿಡಿದ ಕೆಲಸಗಳು ಸುಗಮವಾಗಿ ನೆರವೇರಲಿದೆ. ಬಂಧು ಮಿತ್ರರ ಆಗಮನ ಖುಷಿ ಇಮ್ಮಡಿಗೊಳಿಸಲಿದೆ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ವಾರ್ತೆಗಳನ್ನು ಕೇಳುವಿರಿ. ಕಾರ್ಯನಿಮಿತ್ತ ಓಡಾಟ ಹೆಚ್ಚುವುದು.

ಕನ್ಯಾ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವಿರಿ. ಮನಸ್ಸಿಗೆ ಖುಷಿ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವಿರಿ. ಸಂಗಾತಿಯ ಮಾತಿಗೆ ಬೆಲೆ ಕೊಡಬೇಕಾಗುತ್ತದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ತುಲಾ ರಾಶಿ:
ಪಾಲು ಬಂಡವಾಳ ಹೂಡಿಕೆ ಮಾಡಿದವರಿಗೆ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಗಳಿಸುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ನಿರೀಕ್ಷೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಾಲಗಾರರ ಹಣ ಮರುಪಾವತಿಯಾಗುವುದು.

ವೃಶ್ಚಿಕ ರಾಶಿ:
ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ಕೆಲವೊಂದು ನಿರ್ಧಾರಗಳು ಎಲ್ಲರಿಗೂ ಪಥ್ಯವಾಗದೇ ಹೋಗಬಹುದು. ಆಸ್ತಿ ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆ ಒಳ್ಳೆಯದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳಿಬರುವುದು.

ಧನು ರಾಶಿ:
ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ದೈವಾನುಕೂಲದಿಂದ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗುವುದು. ಇಷ್ಟ ಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ.

ಮಕರ ರಾಶಿ:
ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ಸಹೋದ್ಯೋಗಿಗಳ ಸಹಕಾರ ಸಿಗುವುದು. ಕೃಷಿಕರಿಗೆ ಕೊಂಚ ಹಿನ್ನಡೆಯಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.

ಕುಂಭ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೂ ಅಸೂಯೆಪಡುವಂತೆ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮೀನ ರಾಶಿ:
ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಎಷ್ಟೇ ಪ್ರಗತಿಯಿದ್ದರೂ ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಸುಧಾರಣೆಯಿರುವುದು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago