ಸೋಮವಾರ ( 28-06-2021) ದಿಂದ ‘ಮೈಸೂರಿಗೆ KSRTC ಬಸ್ ಸಂಚಾರ’ ಆರಂಭ -Vishwanews24
ಸೋಮವಾರ ( 28-06-2021) ದಿಂದ ‘ಮೈಸೂರಿಗೆ KSRTC ಬಸ್ ಸಂಚಾರ’ ಆರಂಭ -Vishwanews24
ಬೆಂಗಳೂರು : ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಕೆಟಗರಿ 3ರ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯಲ್ಲಿ, ರಾಜ್ಯ ಸರ್ಕಾರ ಕೆಟಗರಿ 2ರ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು. ಜೊತೆಗೆ ಲಾಕ್ ಡೌನ್ ನಿಯಮದಲ್ಲೂ ಸಡಿಲಿಕೆ ಮಾಡಿತ್ತು. ಜೊತೆಗೆ ಸಾರಿಗೆ ಸಂಚಾರಕ್ಕೂ ಅನುಮತಿಸಿತ್ತು. ಇದರಿಂದಾಗಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ, ದೂರ ಮಾರ್ಗಕ್ಕೂ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಮೈಸೂರು ಜಿಲ್ಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲ ಗೊಳಿಸಿರುವುದರಿಂದ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ದಿನಾಂಕ 28-06-2021ರ ಬೆಳಿಗ್ಗೆ 6 ಗಂಟೆಯಿಂದ ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ನಗರ ಸಾರಿಗೆ, ಸಾಮಾನ್ಯ ಸಾರಿಗೆ, ದೂರ ಮಾರ್ಗದ ಸಾರಿಗೆಗಳನ್ನು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸಲಾಗುತ್ತದೆ.
ಸಾರಿಗೆ ಬಸ್ ಗಳಲ್ಲಿ ಸಂಚರಿಸುವಂತ ಪ್ರಯಾಣಿಕರು, ಕೋವಿಡ್-19 ಮಾರ್ಗಸೂಚಿ ಕ್ರಮಗಳಾದಂತ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ತಿಳಿಸಿದೆ.
