ಬೆಂಗಳೂರು : ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಕೆಟಗರಿ 3ರ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯಲ್ಲಿ, ರಾಜ್ಯ ಸರ್ಕಾರ ಕೆಟಗರಿ 2ರ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು. ಜೊತೆಗೆ ಲಾಕ್ ಡೌನ್ ನಿಯಮದಲ್ಲೂ ಸಡಿಲಿಕೆ ಮಾಡಿತ್ತು. ಜೊತೆಗೆ ಸಾರಿಗೆ ಸಂಚಾರಕ್ಕೂ ಅನುಮತಿಸಿತ್ತು. ಇದರಿಂದಾಗಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ, ದೂರ ಮಾರ್ಗಕ್ಕೂ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಮೈಸೂರು ಜಿಲ್ಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲ ಗೊಳಿಸಿರುವುದರಿಂದ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ದಿನಾಂಕ 28-06-2021ರ ಬೆಳಿಗ್ಗೆ 6 ಗಂಟೆಯಿಂದ ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ನಗರ ಸಾರಿಗೆ, ಸಾಮಾನ್ಯ ಸಾರಿಗೆ, ದೂರ ಮಾರ್ಗದ ಸಾರಿಗೆಗಳನ್ನು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸಲಾಗುತ್ತದೆ.
ಸಾರಿಗೆ ಬಸ್ ಗಳಲ್ಲಿ ಸಂಚರಿಸುವಂತ ಪ್ರಯಾಣಿಕರು, ಕೋವಿಡ್-19 ಮಾರ್ಗಸೂಚಿ ಕ್ರಮಗಳಾದಂತ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ತಿಳಿಸಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…