ಬೆಂಗಳೂರು : ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಕೆಟಗರಿ 3ರ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯಲ್ಲಿ, ರಾಜ್ಯ ಸರ್ಕಾರ ಕೆಟಗರಿ 2ರ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು. ಜೊತೆಗೆ ಲಾಕ್ ಡೌನ್ ನಿಯಮದಲ್ಲೂ ಸಡಿಲಿಕೆ ಮಾಡಿತ್ತು. ಜೊತೆಗೆ ಸಾರಿಗೆ ಸಂಚಾರಕ್ಕೂ ಅನುಮತಿಸಿತ್ತು. ಇದರಿಂದಾಗಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ, ದೂರ ಮಾರ್ಗಕ್ಕೂ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಮೈಸೂರು ಜಿಲ್ಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲ ಗೊಳಿಸಿರುವುದರಿಂದ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ದಿನಾಂಕ 28-06-2021ರ ಬೆಳಿಗ್ಗೆ 6 ಗಂಟೆಯಿಂದ ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ನಗರ ಸಾರಿಗೆ, ಸಾಮಾನ್ಯ ಸಾರಿಗೆ, ದೂರ ಮಾರ್ಗದ ಸಾರಿಗೆಗಳನ್ನು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸಲಾಗುತ್ತದೆ.
ಸಾರಿಗೆ ಬಸ್ ಗಳಲ್ಲಿ ಸಂಚರಿಸುವಂತ ಪ್ರಯಾಣಿಕರು, ಕೋವಿಡ್-19 ಮಾರ್ಗಸೂಚಿ ಕ್ರಮಗಳಾದಂತ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ತಿಳಿಸಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…