ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.
ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ.
ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ.ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…