ದಕ್ಷಿಣ ಕನ್ನಡ

ಸೋಲನ್ನು ಸವಾಲಾಗಿ ಸ್ವೀಕರಿಸಲು ರಮಾನಾಥ ರೈ ಕರೆ

ಮಹಾನಗರ : ಪಕ್ಷಕ್ಕೆ ಕಳೆದ ಚುನಾವಣೆ ಹಿನ್ನಡೆಯು ಅಪಪ್ರಚಾರವೂ ಸಹಿತ ಬೇರೆ ಬೇರೆ ಕಾರಣಗಳಿಂದಾಗಿ ಸೋಲಾಗಿದ್ದು, ಈ ಸೋಲು ಶಾಶ್ವತವಲ್ಲ. ಮತ್ತೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಭೆಯ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ  ಚುನಾವಣಾ ಸೋಲಿನ ಬಗ್ಗೆ ವಿಮರ್ಶಿಸಲು ಜಿಲ್ಲಾ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಯ ಸೋಲು ಒಪ್ಪಿಕೊಂಡು ನಾವು ಧೃತಿಗೆಡಬಾರದು. ಕಾರ್ಯಕರ್ತರು ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಲು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.

ಬಡವರಿಗೆ ಸರಕಾರ ಉತ್ತಮ ಕಾರ್ಯಕ್ರಮಗಳನ್ನು ನೀಡಿದರೂ ಕೂಡ ಈ ಬಗ್ಗೆ ಪ್ರಚಾರ ಮಾಡಲು ಪಕ್ಷದ ಕಾರ್ಯಕರ್ತರು ಮುತುವರ್ಜಿ ವಹಿಸದಿರುವುದೇ ಕಾರಣವಾಗಿದ್ದಲ್ಲದೇ ಬಿಜೆಪಿ ಹಿಂದುತ್ವದ ನೆಲೆಯಲ್ಲಿ ಮತಗಳನ್ನು ವಿಭಜನೆ ಮಾಡಿರುವುದರಿಂದ ಬಿಜೆ ಪಿಗೆ ಭಾರತೀಯ ಪಕ್ಷಕ್ಕೆ ತಾತ್ಕಾಲಿಕ ಗೆಲುವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ಸರಕಾರವನ್ನು ವಚನಭ್ರಷ್ಟ ಸರಕಾರ ಎಂದು ಹೇಳಿರುವುದು ಶೋಚನೀಯ. ಅವರು ಪ್ರಣಾಳಿಕೆಯಲ್ಲಿ ಹೇಳಿದಂತಹ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೊಳಿಸದೇ ಇರುವುದರಿಂದ ಮೋದಿ ನೇತೃತ್ವದ ಸರಕಾರವನ್ನು ವಚನಭ್ರಷ್ಟ ಸರಕಾರ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರಕಾರವನ್ನು ಬದಲಿಸಿ ಕಾಂಗ್ರೆಸ್‌ ಗೆಲ್ಲಿಸಿ ಎಂದು ಘೋಷಣೆ ಕೂಗುವಂತೆ ಕರೆ ನೀಡಿದರು. 

ಮಾಜಿ ಶಾಸಕರಾದ ಅಭಯಚಂದ್ರ ಜೈನ್‌, ಗಂಗಾಧರ್‌ ಗೌಡ, ಜೆ.ಆರ್‌. ಲೋಬೋ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಪಿ.ವಿ ಮೋಹನ್‌, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ಎಸ್‌. ಮಹಮ್ಮದ್‌, ಮಮತಾ ಗಟ್ಟಿ, ಇಬ್ರಾಹಿಂ ಕೋಡಿಜಾಲ್‌, ಧನಂಜಯ ಅಡ್ಪಂಗಾಯ, ಆರ್‌.ಕೆ. ಪೃಥ್ವಿರಾಜ್‌, ಈಶ್ವರ್‌ ಉಲ್ಲಾಳ್‌, ಶಾಹುಲ್‌ ಹಮೀದ್‌, ಶೇಖರ್‌ ಕುಕ್ಕೇಡಿ, ಸುರೇಶ್‌ ಬಲ್ಲಾಳ್‌, ಶಾಲೆಟ್‌ ಪಿಂಟೋ, ಉಮಾ ನಾಥ್‌ ಶೆಟ್ಟಿ, ಲೋಕೇಶ್‌ ಹೆಗ್ಡೆ, ಎ.ಸಿ. ಭಂಡಾರಿ, ಅಬ್ದುಲ್ಲಾ ಬಿನ್ನು, ಸೇವಾದಳ ಅಶ್ರಫ್‌, ಬ್ಲಾಕ್‌ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು, ಜಿಲ್ಲಾ ಯುವ ಕಾಂಗ್ರೆಸ್‌ ಮತ್ತು ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿ.ಪಂ.ಸದಸ್ಯರು, ತಾ.ಪಂ. ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago