ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ಉಚ್ಚಿಲ ತುಂಬೆ ಕರ್ಕೆರ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ” ಬಿಜೆಪಿಯವರು ಕೇವಲ ಮೋದಿ ಹೆಸರಲ್ಲಿ ಮತ ಕೇಳಿ ಜನರನ್ನ ಮರುಳು ಮಾಡಿದ್ದಾರೆ. ಜಾತಿ,ಧರ್ಮ,ದೇವರ ಹೆಸರಿನಲ್ಲಿ ಮತಯಾಚಿಸಿ ಇಂದು ಗೆಲುವು ಸಾಧಿಸಿರಬಹುದು ಆದ್ರೆ ಕಾಪುವಿನಲ್ಲಿ ನಾವು ಮಾಡಿರುವಷ್ಟು ಅಭಿವೃದ್ದಿ ಕಾರ್ಯ ಇವ್ರಿಂದ ಮಾಡಲು ಸಾಧ್ಯವಾಗಿಲ್ಲ, ಈಗಿನ ಶಾಸಕರಿಗೆ ಕಾಪುವನ್ನ ತಾಲೂಕ್ ಮಾಡಬೇಕೆಂದು ಕನಸಿನಲ್ಲಿಯೂ ಅನ್ನಿಸಿರಲು ಸಾಧ್ಯವಿಲ್ಲ, ಮತ್ತು ನಾನು ಸೋಲಿನಿಂದ ಕಂಗೆಟ್ಟಿಲ್ಲ ,ಕ್ಷೇತ್ರ ಬಿಡುವ ಪ್ರಮೇಯನೆ ಇಲ್ಲ ಸದಾ ಕ್ಷೇತ್ರದ ಜನರ ಜೊತೆ,ಕಾರ್ಯಕರ್ತರ ಜತೆಗಿದ್ದೇನೆಂದರು.
ಮುಂದಿನ ದಿನದಲ್ಲಿಯೂ ಕೂಡ ನಾವೂ ಹಾಕಿರುವ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲು ಈ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುವ ವ್ಯಕ್ತಿಯ ಜತೆ ಸೇರಿಕೊಂಡು ಪ್ರಯತ್ನಿಸುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ತೋನ್ಸೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವಿನ್ ಚಂದ್ರ ಶೆಟ್ಟಿ, ಕಾಪು ಯೋಜಾನ ಪ್ರಾಧಿಕಾರ ಅಧ್ಯಕ್ಷ ದಿವಾಕರ್ ಶೆಟ್ಟಿ ಕಾಪು,
ದೇವಿಪ್ರಸಾದ್ ಶೆಟ್ಟಿ ಬೆಳಪು, ದೀಪಕ್ ಕುಮಾರ್ ಏರ್ಮಾಳ್ ,ಗೀತಾ ವಾಗ್ಲೆ,ಎಮ್.ಎ ಗಫೂರ್, ವಿನಯ್ ಬಲ್ಲಾಳ್ ಕಟಪಾಡಿ ಮೊದಲಾದವರು ಉಪಸ್ಥಿತರಿದ್ದರು .
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…