ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಲು ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಲು ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ : ರಾಹುಲ್​ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ,: ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಹೇಳಿದ್ದಾರೆ.

 

 

ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್​ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ನಡೆಯ ಬಗ್ಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.