ನವದೆಹಲಿ,: ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ನಡೆಯ ಬಗ್ಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…