ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
2012ರ ಅಕ್ಟೋಬರ್ 9ರಂದು ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಹಲವಾರು ಇಲಾಖೆಗಳಿಂದ ತನಿಖೆ ನಡೆದು ಅನಂತರ ತಮ್ಮ ನೇತೃತ್ವದ ಸರಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೊಪ್ಪಿಸಿತ್ತು. 2023ರ ವರೆಗೂ ನಡೆದ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷಿಸಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ಜನರದ್ದಾಗಿದೆ.
ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕ್ಷೇತ್ರದ ಶಾಸಕನ ಹಾಗೂ ವೈಯಕ್ತಿಕ ನೆಲೆಯಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…