ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ವಿ.ಸುನಿಲ್ಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರನ್ನು ಒಳಗೊಂಡ ನಿಯೋಗ ಈ ಮನವಿ ಸಲ್ಲಿಸಿದೆ.
ಸೌಜನ್ಯಾ ಪ್ರಕರಣದ ಬಗ್ಗೆ ಮರುತನಿಖೆಗೆ ಅವಕಾಶವಿದ್ದರೆ ಪರಿಶೀಲನೆ ನಡೆಸುತ್ತೇನೆ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಭೇಟಿ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದೇ ರೀತಿ ಸೌಜನ್ಯ ಹೋರಾಟ ಸಮಿತಿ ಮುಖಂಡರೂ ಹೋರಾಟ ನಡೆಸುತ್ತಿದ್ದಾರೆ. ಕೊಲೆಯಾದ ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಇದರ ಜತೆಗೆ ಕೆಲ ವ್ಯಕ್ತಿಗಳು, ಕೆಲವು ಶ್ರದ್ಧಾ ಕೇಂದ್ರಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇದಕ್ಕೆ ಕೊನೆ ಹಾಡಬೇಕಿದ್ದರೆ ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಆಗ್ರಹಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…