ಬೆಂಗಳೂರು : 11 ವರ್ಷದ ಹಿಂದೆ ನಡೆದ ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇದೀಗ ಮತ್ತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ನಾಲ್ಕು ತಿಂಗಳ ಬಳಿಕ ಇದೀಗ ಸಿಬಿಐ ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್ ರಾವ್ ಎಂದು ಸಾಬೀತು ಮಾಡಲು ಮುಂದಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪ್ರತಿಭಟನೆ ಬಳಿಕ ರಾಜ್ಯ ಸರ್ಕಾರ ಸಿಬಿಐಗೆ ತನಿಖೆ ಜವಾಬ್ದಾರಿ ಒಪ್ಪಿಸಿತ್ತು. ಅದರಂತೆ ಸಂಸ್ಥೆಯು ತನಿಖೆ ನಡೆಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೂಡಾ ನಡೆದಿತ್ತು.ಸಂತೋಷ್ ರಾವ್ ವಿರುದ್ಧ ಸಾಕ್ಷ್ಯ ಗಳಿಲ್ಲದ ಕಾರಣ ಕೋರ್ಟ್ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆ ಮಾಡಿತ್ತು.
2023ರ ಜುಲೈ 16ರಂದು ನೀಡಿದ ತೀರ್ಪಿನ ವಿರುದ್ಧ ಈಗ ಮೇಲ್ಮನವಿ ಸಲ್ಲಿಸಲಾಗಿದೆ. ಜುಲೈ 16ರಂದು ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ತೀರ್ಪು ಬಂದ ನಾಲ್ಕು ತಿಂಗಳ ಬಳಿಕ ಮನವಿ ಮಾಡಲಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…