Featured

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ – vishwanews24

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ

ಮಂಗಳೂರು: ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್‌ಗಳಿಗೆ ಆಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನ.11ರ ಬೆಳಿಗ್ಗೆ 9 ಗಂಟೆಯಿಂದ ನ್ಯಾಯ ಸಿಗುವ ತನಕ ಧರಣಿ ನಡೆಯಲಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳನ್ನು ಸಮಗ್ರವಾದ ತನಿಖೆ ನಡೆಸಿ ದುರುದ್ದೇಶದಿಂದ ಅಕ್ರಮವಾಗಿ ರಚಿಸಿಕೊಂಡ ಶ್ರೀ ಮಹಾಗಣ ಪತಿ ಸೇವಾ ಟ್ರಸ್ಟ್ ಸೌತಡ್ಕ (ರಿ) ಅನ್ನು ರದ್ದು ಪಡಿಸಿ ಅದರ ಎಲ್ಲಾ ಆಸ್ತಿಯನ್ನು ಅದರ ನಿಜವಾದ ಮಾಲೀಕರಾದ ಸೌತ್ತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಹಸ್ತಾಂತರಿಸಬೇಕು. ಟ್ರಸ್ಟ್ ಆದ ಬಳಿಕ ದಿಂದ ಇಂದಿನವರೆಗೆ ಆದ ಎಲ್ಲಾ ಆದಾಯಗಳ ಖರ್ಚು ವೆಚ್ಚಗಳ ತನಿಖೆ ನಡೆಸಿ ಎಲ್ಲಾ ಆದಾಯಗಳನ್ನು ದೇವಳದ ಖಜಾನೆಗೆ ತುಂಬಿಸುವಂತೆ ಆದೇಶಿಸಬೇಕು. ಕೊಕ್ಕಡ ಗ್ರಾಮದ ಸ.ನಂ. 215/2. 215/4, 215/5 ರಲ್ಲಿಯ ಒಟ್ಟು 3.46 ಎಕ್ರೆ ಸ್ಥಿರಾಸ್ತಿಯನ್ನು ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಭಕ್ತರ ಸಹಾಯದೊಂದಿಗೆ ಮೇಲೆ ಹೇಳಿದ ವಾಸುದೇವ ಶಬರಾಯ, ರಾಘವ 5 ಕೆ ಮತ್ತು ವಿಶ್ವ ನ ನಾಥ ಕೆ ಅವರು ಹೆಸರಿನಲ್ಲಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ದೇವಸ್ಥಾನದ ಹೆಸರಿಗೆ ಬರೆಯಿಸಿಕೊಳ್ಳುವರೇ ಸೂಕ್ತ ಆದೇಶ ಮಾಡ ಬೇಕಾಗಿ ಸರಕಾರವನ್ನು ಆಗ್ರಹಿಸಿ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ಶಬರಾಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯಪ್ರಧಾನ ಕಾರ್ಯದರ್ಶಿ ಶ್ಯಾಮರಾಜ್, ಖಜಾಂಜಿ ವಿಶ್ವನಾಥ ಕೆ, ಉಪಾಧ್ಯಕ್ಷ ಪ್ರಶಾಂತ ರೈ ಗೋಳಿತೊಟ್ಟುಸದಸ್ಯ ಶ್ರೀ ವತ್ಸ ಉಪಸ್ಥಿತರಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

16 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

43 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

48 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

55 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago