Featured

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ – vishwanews24

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ದುರುಪಯೋಗ ಆರೋಪ : ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ನಿರ್ಧಾರ

ಮಂಗಳೂರು: ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್‌ಗಳಿಗೆ ಆಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನ.11ರ ಬೆಳಿಗ್ಗೆ 9 ಗಂಟೆಯಿಂದ ನ್ಯಾಯ ಸಿಗುವ ತನಕ ಧರಣಿ ನಡೆಯಲಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳನ್ನು ಸಮಗ್ರವಾದ ತನಿಖೆ ನಡೆಸಿ ದುರುದ್ದೇಶದಿಂದ ಅಕ್ರಮವಾಗಿ ರಚಿಸಿಕೊಂಡ ಶ್ರೀ ಮಹಾಗಣ ಪತಿ ಸೇವಾ ಟ್ರಸ್ಟ್ ಸೌತಡ್ಕ (ರಿ) ಅನ್ನು ರದ್ದು ಪಡಿಸಿ ಅದರ ಎಲ್ಲಾ ಆಸ್ತಿಯನ್ನು ಅದರ ನಿಜವಾದ ಮಾಲೀಕರಾದ ಸೌತ್ತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಹಸ್ತಾಂತರಿಸಬೇಕು. ಟ್ರಸ್ಟ್ ಆದ ಬಳಿಕ ದಿಂದ ಇಂದಿನವರೆಗೆ ಆದ ಎಲ್ಲಾ ಆದಾಯಗಳ ಖರ್ಚು ವೆಚ್ಚಗಳ ತನಿಖೆ ನಡೆಸಿ ಎಲ್ಲಾ ಆದಾಯಗಳನ್ನು ದೇವಳದ ಖಜಾನೆಗೆ ತುಂಬಿಸುವಂತೆ ಆದೇಶಿಸಬೇಕು. ಕೊಕ್ಕಡ ಗ್ರಾಮದ ಸ.ನಂ. 215/2. 215/4, 215/5 ರಲ್ಲಿಯ ಒಟ್ಟು 3.46 ಎಕ್ರೆ ಸ್ಥಿರಾಸ್ತಿಯನ್ನು ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಭಕ್ತರ ಸಹಾಯದೊಂದಿಗೆ ಮೇಲೆ ಹೇಳಿದ ವಾಸುದೇವ ಶಬರಾಯ, ರಾಘವ 5 ಕೆ ಮತ್ತು ವಿಶ್ವ ನ ನಾಥ ಕೆ ಅವರು ಹೆಸರಿನಲ್ಲಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ದೇವಸ್ಥಾನದ ಹೆಸರಿಗೆ ಬರೆಯಿಸಿಕೊಳ್ಳುವರೇ ಸೂಕ್ತ ಆದೇಶ ಮಾಡ ಬೇಕಾಗಿ ಸರಕಾರವನ್ನು ಆಗ್ರಹಿಸಿ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ಶಬರಾಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಯಪ್ರಧಾನ ಕಾರ್ಯದರ್ಶಿ ಶ್ಯಾಮರಾಜ್, ಖಜಾಂಜಿ ವಿಶ್ವನಾಥ ಕೆ, ಉಪಾಧ್ಯಕ್ಷ ಪ್ರಶಾಂತ ರೈ ಗೋಳಿತೊಟ್ಟುಸದಸ್ಯ ಶ್ರೀ ವತ್ಸ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago