Featured

ಸೌದಿ ಅರೇಬಿಯಾದಲ್ಲಿ ವ್ಯಕ್ಯಿ ಬಂಧನ : ಬಿಡುಗಡೆಗೆ ಅಗತ್ಯ ಕ್ರಮ – ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ತುರ್ತು ಸ್ಪಂದನೆ -Vishwanews24

ಉಡುಪಿ : ಫೇಸ್‍ಬುಕ್ ನಲ್ಲಿ , ಸೌದಿ ದೊರೆಯ ವಿರುದ್ದ ಪೋಸ್ಟ್ ಮಾಡಿದ ಅರೋಪದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ , ಉಡುಪಿ ಜಿಲ್ಲೆ ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು , ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು.

ಭಾರತೀಯ ದೂತವಾಸದ ಅಧಿಕಾರಿಗಳೊಂದಿಗೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ ಬಂಗೇರಾ ಅವರ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಕೋರಿದರು. ಈ ಪ್ರಕರಣವು ಕಾನೂನು ಮೂಲಕ ಇತ್ಯರ್ಥವಾಗಬೇಕಿದ್ದು, ಸ್ವಲ್ಪ ವಿಳಂಬವಾಗಲಿದ್ದು, ಬಂಧನದಲ್ಲಿರುವ ಅವರು ಕ್ಷೇಮವಾಗಿದ್ದಾರೆ ಎಂದು ದೂತವಾಸದ ಅಧಿಕಾರಿಗಳು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಮಂಗಳವಾರ, ಹರೀಶ್ ಬಂಗೇರಾ ಅವರ ಪತ್ನಿ ಶ್ರೀಮತಿ. ಸುಮನ ಬಂಗೇರಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕಾರ್ಯದರ್ಶಿಗಳು, ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಸರ್ಕಾರವು ತಮ್ಮ ಪರವಾಗಿ ನಿಂತಿದ್ದು ಆದಷ್ಟು ಶೀಘ್ರದಲ್ಲಿ ತಮ್ಮ ಪತಿಯ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಅವರಲ್ಲಿ ಧೈರ್ಯ ತುಂಬಿದರು.

ನಂತರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಗೋಪಾಡಿ ಗ್ರಾಮದಲ್ಲಿನ ಹರೀಶ್ ಬಂಗೇರಾ ಅವರ ಬೇಟಿ ನೀಡಿ, ಶ್ರೀಮತಿ ಸುಮನ ಬಂಗೇರಾ ಅವರನ್ನು ಬೇಟಿ ಮಾಡಿ, ಹರೀಶ್ ಬಂಗೇರ ಅವರ ಬಿಡುಗಡೆ ಕುರಿತಂತೆ ಇಲಾಖೆವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಸುಮನ ಬಂಗೇರಾ, ಬಂಧನವಾದ ಬಳಿಕ ತಮ್ಮ ಪತಿ ಹರೀಶ್ ಬಂಗೇರಾ , ಅವರು ಕೆಲಸ ಮಾಡುವ ಕಂಪನಿಯು ತಮ್ಮನ್ನು ಸಂಪರ್ಕಿಸಿ, ಒಂದು ಬಾರಿ ಮಾತನಾಡಿತ್ತು. ತದ ನಂತರ ಎಂಬೆಸ್ಸಿಯು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಸೌದಿ ಪೋಲೀಸ್ ಮುಖಾಂತರವೆ ಅವರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ತಮ್ಮ ಪತಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸಬೇಕಾಗಿ ಕೋರುತ್ತಾ, ಸಾಧ್ಯವಾದಲ್ಲಿ ತಮ್ಮ ಪತಿಯೊಂದಿಗೆ ಒಮ್ಮೆ ದೂರವಾಣಿಯಲ್ಲಿ ಮಾತನಾಡಿಸಲು ಅವಕಾಶ ಮಾಡಿಕೊಡುವಂತೆ ಅವರು ಕೋರಿದರು.

ಹರೀಶ್ ಬಂಗೇರ ಅವರು , ಕಳೆದ ಆರು ವರ್ಷಗಳಿಂದ ಅಲ್ಲೇ ಕೆಲಸ ಮಾಡುತ್ತಿದ್ದು, ಹಿಂದಿನ ವರ್ಷ ಜನವರಿಯಲ್ಲಿ ಊರಿಗೆ ಭೇಟಿ ನೀಡಿದ್ದರು. ಅವರು ಬಂಧನಕ್ಕೊಳಗಾದ ಸುದ್ದಿ ತಿಳಿಯುತ್ತಲೇ ಪ್ರಕ್ರಿಯೆಗನುಗುಣವಾಗಿ , ಉಡುಪಿ ಸೆನ್ ಪೋಲಿಸರಿಗೆ ಅರ್ಜಿ ನೀಡಿದ್ದು, ಪ್ರಕರಣವನ್ನು ಜಿಲ್ಲೆಯ ಮಾನವ ಹಕ್ಕು ಆಯೋಗದ ಗಮನಕ್ಕೂತರಲಾಗಿದೆ ಎಂದು ಹರೀಶ್ ಬಂಗೇರ ಅವರ ಮಾವ ಶ್ರೀನಿವಾಸ್ ಬಂಗೇರ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago