ಪಡುಬಿದ್ರಿ: ಸೌದಿ ಅರೇಬಿಯಾಯಲ್ಲಿ ನಡೆದ ಅಪಘಾತವೊಂದರಲ್ಲಿ ಪಡುಬಿದ್ರಿಯ ಯುವಕನೋರ್ವ ಮೃತಪಟ್ಟಿದ್ದಾನೆ.
ಪಡುಬಿದ್ರಿಯ ಕಂಚಿನಡ್ಕ ನಿವಾಸಿ ಹಂಝರವರ ಪುತ್ರ ಅಬ್ದುಲ್ ಖಾದರ್ (35) ಎಂದು ಗುರುತಿಸಲಾಗಿದೆ. ಈತ ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದಾಗ ಹೈಲ್ನ 180 ಕಿಮೀ ದೂರದಲ್ಲಿ ಸಂಚರಿಸುತಿದ್ದಾಗ ಟವರ್ ಸ್ಪೋಟಗೊಂಡು ಅಪಘಾತ ಸಂಭವಿಸಿತ್ತು. ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಂದೆ, ಪತ್ನಿ, ಎರಡು ಗಂಡು ಮಕ್ಕಳು, ಮೂವರು ಸಹೋದರರನ್ನು ಅಗಲಿದ್ದಾರೆ. ಅಬ್ದುಲ್ ಖಾದರ್ ಸೌದಿಯ ಜಿದ್ದಾದಲ್ಲಿ ಸ್ವಂತ ಉದ್ಯಮ ನಡೆಸುತಿದ್ದರು. ಖಾದರ್ ಜಿದ್ದಾದಲ್ಲಿ ನೆಲೆಸಿದ್ದು, ಹೈಲ್ಗೆ ವ್ಯಾಪಾರಕ್ಕಾಗಿ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಸೌದಿಯಲ್ಲಿಯೇ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…