Featured

ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು – Vishwanews24

ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು

ಕತಾರ್‌ ನಿಂದ ಮದೀನಾಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತುದ್ದ ವೇಳೆ ಕಾರು ಅಪಘಾತಕ್ಕೀಡಾಗಿ 3 ತಿಂಗಳ ಹಸುಗೂಸು ಸೇರಿ ಒಂದೇ ಮನೆಯ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ ರಿಯಾದ್‌ ಹೊರವಲಯದ ಝಲ್ಫಾ ಎಂಬಲ್ಲಿ ಬುಧವಾರ ರಾತ್ರಿ ವರದಿಯಾಗಿದೆ.

ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಶಮೀಮ್‌ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ ( 29) ಆಕೆಯ ಪತಿ ಮುಹಮ್ಮದ್‌ ರಮೀಝ್‌ (34) ಮಕ್ಕಳಾದ ಆರೂಶ್‌ (3) ಮತ್ತು ರಾಹ ( 3 ತಿಂಗಳು) ಎಂದು ಗುರುತಿಸಲಾಗಿದ್ದು, ಅದೇ ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ನಮ್‌ ಎಂಬವರ ಮಗಳು ಫಾತಿಮಾ (19) ಗಂಭೀಯ ಗಾಯಗೊಂಡಿದ್ದು, ಆಕೆಯನ್ನು ರಿಯಾದ್‌ ನ ಆಸ್ಪತ್ರೆಯಲ್ಲಿ ಚಿಕಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಪೈಕಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಹಿಬಾ ಅವರ ಇನ್ನೋರ್ವ ಸಹೋದರಿ ಲುಬ್ನಾ ಅವರ ಮಗ ಈಸ (4) ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಕುಟುಂಬಸ್ಥರು ಸದಸ್ಯರು ಮಾಹಿತಿ ನೀಡಿದ್ದಾರೆ.

 

ಮೃತ ಹಿಬಾ ಅವರ ತಂದೆ ಶಮೀಮ್‌ ತಾಯಿ ಝರೀನ ಮತ್ತು ಮೊಮ್ಮಕ್ಕಳು ಒಂದು ಕಾರಿನಲ್ಲಿ ಮತ್ತು ಹಿಬಾ ತನ್ನ ಕುಟುಂಬದೊಂದಿಗೆ ಇನ್ನೊಂದು ಕಾರಿನಲ್ಲಿ ಮಂಗಳವಾರ ಫಜರ್‌ ನಮಾಝ್‌ ಮುಗಿಸಿಕೊಂಡು ಉಮ್ರಾ ಯಾತ್ರೆ ಆರಂಭಿಸಿದ್ದರು. ಮಂಗಳವಾರ ರಾತ್ರಿ ರಿಯಾದ್‌ ತಲುಪಿದ್ದ ಅವರು ಅಲ್ಲೇ ತನ್ನ ಕುಟುಂಸ್ಥರ ಮನೆಯಲ್ಲಿ ಉಳಿದುಕೊಂಡು ಬುಧವಾರ ಬೆಳಗ್ಗೆ ರಿಯಾದ್‌ ನಿಂದ ಮತ್ತೆ ಉಮ್ರಾ ಯಾತ್ರೆ ಆರಂಭಿಸಿದ್ದರು.

ರಮೀಝ್‌ ತನ್ನ ಪತ್ನಿ ಹಿಬಾ, ಮಕ್ಕಳಾದ ಆರೂಶ್‌, ರಾಹ ಮತ್ತು ಹಿಬಾ ಅವರ ಸಹೋದರಿಯರ ಮಕ್ಕಳಾದ ಫಾತಿಮಾ ಮತ್ತು ಈಸ ಜೊತೆ ಒಂದು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಇನ್ನೊಂದು ಕಾರಿನಲ್ಲಿ ಹಿಬಾ ಅವರ ತಂದೆ ಶಮೀಮ್‌, ತಾಯಿ ಝರೀನಾ ಮೊದಲಾದವರು ಪ್ರಯಾಣಿಸುತ್ತಿದ್ದರು. ರಮೀಝ್‌ ಅವರು ಚಲಾಯಿಸುತ್ತಿದ್ದ ಕಾರು ರಿಯಾದ್ ನಿಂದ ತಾಯೀಫ್ ಗೆ ಹೋಗುವ ಮಾರ್ಗ ಮಧ್ಯದ ಸುಮಾರು 250 ಕಿ.ಮೀ. ದೂರದದಲ್ಲಿರುವ ಝುಲ್ಫಾ ಎಂಬಲ್ಲಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯಿಂದ ಹಲವು ಮೀಟರ್‌ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ರಮೀಝ್‌, ಹಿಬಾ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಂದು ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿತು ಎಂದು ತಿಳಿದು ಬಂದಿದೆ. ಹಿಬಾ ಅವರ ಸಹೋದರಿಯ ಮಗಳು ಫಾತಿಮಾ ಗಂಭೀರ ಗಾಯಗೊಂಡಿದ್ದರೆ, ಮತ್ತೋರ್ವ ಸಹೋದರಿಯ ಮಗ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago