Featured

ಸೌದಿ ಅರೇಬಿಯಾ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 – ಶಿವಾನಂದ ಕೋಟ್ಯಾನ್ ರಿಗೆ “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ – Vishwanews24

ಸೌದಿ ಅರೇಬಿಯಾ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 ..

ಶಿವಾನಂದ ಕೋಟ್ಯಾನ್ ರಿಗೆ “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ

ಸೌದಿ ಅರೇಬಿಯಾದ ದಮಮ್ ನಲ್ಲಿ ತಾರೀಖು 08/02/2024 ರ ಗುರುವಾರ ಅದ್ಧೂರಿಯಾಗಿ ಸಂಪನ್ನವಾಯಿತು. ಓಮಾನ್ ಮಸ್ಕತ್ ನಲ್ಲಿರುವ ಅನಿವಾಸಿಗ ಶಿವಾನಂದ ಕೋಟ್ಯನ್ ರವರಿಗೆ ವಿಶೇಷವಾಗಿ ಆಹ್ವಾನಿಸಿ ತಮ್ಮ ಕೊಡುಗೆ ಕಲೆ, ಸಾಹಿತ್ಯ ಮತ್ತು ಚಲನಚಿತ್ರಗಳ ಆಯೋಜನೆ, ಸಹಾಯ- ಸಹಕಾರ ಸಮಾಜ ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿನ ಸೇವೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.

ವೈಭವಯುತವಾದ 17ನೇ ವಿಶ್ವ ಕನ್ನಡ ಸಂಸ್ಕೃತಿಕ ಸಮ್ಮೇಳನ ಪ್ರಥಮ ಬಾರಿಗೆ ಸೌದಿ ಅರೇಬಿಯಾದಲ್ಲಿ ಯಶಸ್ವಿಯಾಗಿ ಜರುಗಿತು ಕನ್ನಡ ಭಾಷೆ, ನಡೆ ನುಡಿಯ ಬಗೆಗಿನ ಮನರಂಜನೆ, ಕವಿ ಗೋಷ್ಟಿ, ಯಕ್ಷಗಾನ ಕಾರ್ಯಕ್ರಮಗಳು ಜರಗಿದವು.

ಮುಖ್ಯ ಅತಿಥಿಗಳಾಗಿ ಮಾನ್ಯ ಸಭಾಪತಿ ಯು.ಟಿ. ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರು ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಡಾ. ಆರತಿ ಕ್ರಷ್ಣ ಉಪಾಧ್ಯಕ್ಷರು ಅನಿವಾಸಿ ಕನ್ನಡಿಗರ ಕೋಶ, ಕರ್ನಾಟಕ ಸರಕಾರ, ಪುತ್ತೂರು ಶಾಶಕ ಅಶೋಕ್ ರೈ, ಜನಾಬ್ ರಹೀಮ್ ಖಾನ್ ಮಾನ್ಯ ಪೌರ ಆಡಳಿತ ಮತ್ತು ಹಜ್ ಖಾತೆ, ಪದ್ಮರಾಜ್ ಆರ್ ವಕೀಲರು ಮತ್ತು ಕೋಶಾಧಿಕಾರಿ ಗೋಕರ್ಣನಾಥ ಮಂದಿರ ಮಂಗಳೂರು, ಮಂಜುನಾಥ ಸಾಗರ್ ಸ್ಥಾಪಕ, ಅಧ್ಯಕ್ಷರು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ, ಉಪಸ್ಥಿತಿಯಲ್ಲಿದ್ದರು.

ಅಯೂಜಕರಾದ ಜನಾಬ್ ಝಕರಿಯಾ ಬಜ್ಪೆ, ಜನಾಬ್ ಶೇಖ್ ಕರ್ನಿರೆ ಮತ್ತು ಶತೀಶ್ ಕುಮಾರ್ ಬಜಲ್ ಮತ್ತು ತಂಡವು ಅವಿಸ್ಮರಣೀಯ ಕನ್ನಡ ಸಮ್ಮೇಳನವನ್ನು ಏರ್ಪಡಿಸಿದರು. ಕನ್ನಡ, ತುಳು ಗಾಯನ, ಹಾಗೂ ನ್ರತ್ಯ, ವೈವಿಧ್ಯವನ್ನು ಸೌದಿಯ ಕನ್ನಡಿಗರು ಕಂಡು ಸಂತೋಷ ಗೊಂಡರು.

Vishwa News 24

Recent Posts

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

9 minutes ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

21 minutes ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

35 minutes ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

42 minutes ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

1 hour ago

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…

1 hour ago