ಬೆಳ್ತಂಗಡಿ: ಇಂದು ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.
ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.
ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಇಹಲೋಕ ತ್ಯಜಿಸಿದರು. ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಮೃತರು ತಂದೆ ಅಬ್ದುಲ್ ರಝಾಕ್, ತಾಯಿ ಶಂಶೀರ ಬಾನು, ಪತ್ನಿ ರೇಷ್ಮಾ ಹಾಗೂ ಒಂದು ಗಂಡು,ಮೂರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…