ಮಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್ನಲ್ಲಿ ನಡೆದಿದೆ.
ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್ ಯೂತ್ ಕ್ಲಬ್ನ ಸದಸ್ಯರಾಗಿದ್ದರು. ಅವರು ಸಾವನ್ನಪ್ಪುವ ಕೇವಲ 15 ನಿಮಿಷದ ಮುನ್ನ ಸುಮಾರು ಅರ್ಧ ಗಂಟೆಗಳ ಕಾಲ ಮೊಬೈಲ್ನಲ್ಲಿ ತಾಯಿಯೊಂದಿಗೆ ಮಾತನಾಡಿದ್ದರು ಎನ್ನಲಾಗಿದೆ.
ಇನ್ನು ಮನ್ಸೂರ್ ಮೂಲ್ಕಿ ಅವರ ಅಂತ್ಯಕ್ರಿಯೆ ಸೌದಿಯಲ್ಲೇ ನಡೆಯಲಿದೆ. ಅವರ ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಬಾವ ಸೇರಿ 6 ಮಂದಿ ಪ್ರಯಾಣಕ್ಕೆ ಮನ್ಸೂರ್ ಅವರು ಉದ್ಯೋಗದಲ್ಲಿ ಇರುವ ಸಂಸ್ಥೆಯ ಹೆಜಮಾಡಿ ಮೂಲದ ಮಾಲಕ, ಉದ್ಯಮಿ ಸಿರಾಜ್ ಅವರು ಕುಟುಂಬದವರ ಸೌದಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದಾರೆ. ಸಿರಾಜ್ ಅವರು ಇತ್ತೀಚೆಗಷ್ಟೇ ಊರಿಗೆ ಬಂದಿದ್ದು, ವಾಪಸ್ ಸೌದಿಗೆ ತೆರಳಿದ್ದರು. 15 ವರ್ಷಗಳಿಂದ ಅವರು ಸೌದಿ ಅರೇಬಿಯಾದ ರಿಯಾದ್ನಲ್ಲಿ ಕೆಲಸ ಮಾಡುತ್ತಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…