Featured

ಸ್ಕಾರ್ಫ್ ವಿವಾದ :  ಕೊಪ್ಪ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು – Vishwanews24

ಸ್ಕಾರ್ಫ್ ವಿವಾದ :  ಕೊಪ್ಪ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು – Vishwanews24

ಕೊಪ್ಪ: ಇಲ್ಲಿನ ಬಾಳಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿಸ್ಕಾರ್ಫ್- ಕೇಸರಿ ಶಾಲು ವಿವಾದ ಮತ್ತೆ ಸುದ್ದಿ ಮಾಡಿದೆ.  ಮುಸ್ಲಿಂ ವಿದ್ಯಾರ್ಥಿನಿಯರು ತರಗತಿ ಒಳಗೆ ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ಕೇಸರಿ ಶಾಲು ಧರಿಸಿ ಸೋಮವಾರ ತರಗತಿಗೆ ಹಾಜರಾಗಿದ್ದಾರೆ.

ಈ ಕಾಲೇಜಿನಲ್ಲಿ ಮೂರು ವರ್ಷಗಳ ಹಿಂದೆಯೂ ಇದೇರೀತಿ ಕೆಲವು ವಿದ್ಯಾರ್ಥಿಗಳು ವಿನಾ ಕಾರಣ ವಿವಾದ ಸೃಷ್ಟಿಸಿದ್ದರು. ಬಳಿಕ ವಿದ್ಯಾರ್ಥಿಗಳ ಪೋಷಕರು, ಪ್ರಾಂಶುಪಾಲರ ವಿವಾದವನ್ನು ತಿಳಿಗೊಳಿಸಿದ್ದರು.

ಇದೀಗ ಮತ್ತೆ ಕಾಲೇಜಿನಲ್ಲಿ ಸ್ಕಾರ್ಫ್ ಹೆಸರಿನಲ್ಲಿ ವಿವಾದ ಸೃಷ್ಟಿಸಲು ಕೆಲವು ವಿದ್ಯಾರ್ಥಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಾಹಿತಿ ತಿಳಿದ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಶಾಲೆಗೆ ಭೇಟಿ ನೀಡಿ, ರಾಜ್ಯ ಸರಕಾರ ಕಾಲೇಜು ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಯಾವ ಆದೇಶ ಹೊರಡಿಸಿದೆಯೋ ಅದರಂತೆ ವಿದ್ಯಾರ್ಥಿಗಳು ನಿಯಮಗಳನ್ನು ಪಾಲಿಸಬೇಕು. ಒಂದು ಧರ್ಮದವರನ್ನು ಗುರಿಯಾಗಿಸಿಕೊಂಡು ಕಾಲೇಜಿನ ಶೈಕ್ಷಣಿಕ ವಾತಾವರಣದಲ್ಲಿ ಗೊಂದಲ ಮೂಡಿಸಬಾರದು. ಕಾಲೇಜು ಮುಖ್ಯಸ್ಥರು ಸರಕಾರದ ಆದೇಶದಂತೆ ಕಾಲೇಜಿನಲ್ಲಿ ನಿಯಮಗಳನ್ನು ಪಾಲಿಸಬೇಕು. ಗೊಂದಲ ಸೃಷ್ಟಿಸುವ ವಿದ್ಯಾರ್ಥಿಗಳ ಪೋಷಕರನ್ನು ಕರೆಸಿ ಸಭೆ ನಡೆಸುವಂತೆ ಸೂಚಿಸಿದರು.

ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲ ಅನಂತ್ ಅವರು, ಸರಕಾರಿ ನಿಯಮದಂತೆಯೇ ಎಲ್ಲ ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಕಾಲೇಜಿಗೆ ಬರಬೇಕು. ಸರಕಾರದ ಆದೇಶವನ್ನು ತಪ್ಪದೇ ಪಾಲಿಸಬೇಕು. ಸರಕಾರದ ಆದೇಶವನ್ನು ನಾವು ಬದಲಾಯಿಸಲು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳು ನಿಯಮಗಳಂತೆಯೇ ನಡೆದುಕೊಳ್ಳಬೇಕೆಂದು ಸೂಚನೆ ನೀಡಿದರೆಂದು ತಿಳಿದು ಬಂದಿದ್ದು, ಆ ಬಳಿಕ ಸ್ಕಾರ್ಫ್-ಕೇಸರಿ ಶಾಲು ವಿವಾದ ತಹಬದಿಗೆ ಬಂದಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…

10 minutes ago

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ – vishwanews24

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ ಕಠ್ಮಂಡು: ನೇಪಾಳ-ಚೀನಾ ಗಡಿಯ…

17 minutes ago

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ – vishwanews24

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…

47 minutes ago

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

20 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

21 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

23 hours ago