ಮೈಸೂರು : ಲೋಕಸಭೆ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ಫಲಿತಾಂಶ ವ್ಯತ್ಯಾಸವಿರುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇವಿಎಂ ಯಂತ್ರವನ್ನು ಮ್ಯಾಜುಪ್ಲೇಟ್ ಮಾಡುತ್ತಾರೆ ಎನ್ನುವ ಅನುಮಾನ ಸ್ಥಳೀಯ ಸಂಸ್ಥೆಗಳ ಫಲಿತಾಂಶದಿಂದ ಮತ್ತಷ್ಟು ಸ್ಪಷ್ಟವಾಗಿದ್ದು, ಸಂಶಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು.
ಚುನಾವಣೆಗಳಲ್ಲಿ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನ ಇಟ್ಟುಕೊಂಡು ಮತ ಹಾಕಿದ್ದರು. ಸ್ಥಳೀಯ ಚುನಾವಣೆಯಲ್ಲಿ ಸ್ಥಳೀಯವಾದ ವಿಚಾರಗಳ ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ. ಪ್ರತೀ ಚುನಾವಣೆಗಳಲ್ಲೂ ಕೂಡ ಫಲಿತಾಂಶಗಳಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ಸಂಪೂರ್ಣವಾಗಿ ಹೈಕಾಮಾಂಡ್ ನೋಡಿಕೋಳ್ಳುತ್ತದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…