ಶಿವಮೊಗ್ಗ, :ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆ ಹಿನ್ನಡೆಯಾಗಿದೆ.
ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕೆಲವೆಡೆ ಜಂಟಿಯಾಗಿ ಮೈತ್ರಿಯಾಗಿ ಕಣಕ್ಕಿಳಿದಿದ್ದರೆ ಕೆಲವೆಡೆ ಏಕಾಂಗಿಯಾಗಿ ಸ್ಪರ್ಧಿಸಿದೆ. ಇವೆಲ್ಲದರ ನಡುವೆ ದೋಸ್ತಿ ಮತ್ತು ಬಿಜೆಪಿ ನಡುವೆ ನೇರ ಹೋರಾಟ ನಡೆದು ಇಬ್ಬರು ಸಿಹಿ ಕಹಿ ಅನುಭವವನ್ನು ಪಡೆದಂತಾಗಿದೆ.
ಸಾಗರ ನಗರಸಭೆಯಲ್ಲಿ ಮತ್ತೊಮ್ಮೆ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದ್ದು , ಒಟ್ಟು 31 ಸದಸ್ಯ ಬಲದಲ್ಲಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ.
ಪ್ರಬಲ ಪೈಪೋಟಿಯ ನಡುವೆಯೂ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಕಾಂಗ್ರೆಸ್ 9 ಸ್ಥಾನಗಳನ್ನು ಪಡೆದರೆ ಪಕ್ಷೇತರರು 5 ಸ್ಥಾನದಲ್ಲಿ ಗೆದ್ದಿದ್ದಾರೆ. ಜೆಡಿಎಸ್ ಇಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದುಕೊಂಡಿದೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಶಿಕಾರಿಪುರ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…