ತುಮಕೂರು: ತುಮಕೂರಿನ ಜಾತ್ರೆಗೆ ಸ್ನೇಹಿತನೊಂದಿಗೆ ಬಂದಿದ್ದ ಬಾಲಕಿ ನಂತರ ಪಕ್ಕದಲ್ಲಿಯೇ ಇದ್ದ ಬೆಟ್ಟದ ಬಳಿಗೆ ಮಾತನಾಡಲು ಹೋಗಿದ್ದಾರೆ. ಇವರನ್ನು ಹಿಂಬಾಲಿಸಿಕೊಂಡು ಹೋದ ಕಿಡಿಗೇಡಿಗಳು ಅವರು ಕುಳಿತಿದ್ದ ವಿಡಿಯೋವನ್ನು ಮಾಡಿ ತೋರಿಸಿ ಬೆದರಿಸಿದ್ದಾರೆ. ನಂತರ, ಬಾಲಕಿಯನ್ನು ಎಳೆದೊಯ್ದು ಮನೆಯೊಂದರಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿದ್ದಾರೆ.
ಜಾತ್ರೆಗೆ ಸಾವಿರಾರು ಜನರು ಆಗಮಿಸುತ್ತಾರೆ. ಈ ವೇಳೆ ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರಿಗೆ ಬೆಟ್ಟದ ಕಡೆಗೆ ಹೋಗದಂತೆ ಪೊಲೀಸು ನಿಗಾವಹಿಸಿರುತ್ತಾರೆ. ಆದರೂ, ಪೊಲೀಸರ ಕಣ್ಣು ತಪ್ಪಿಸಿ ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗೆ, ತನ್ನ ಬಾಯ್ಫ್ರೆಂಡ್ನೊಂದಿಗೆ ಜಾತ್ರೆಗೆ ಬಂದ ಬಾಲಕಿಯೂ ಕೂಡ ಬೆಟ್ಟದ ಬಳಿ ಹೋಗಿ ಮಾತನಾಡಲು ಕುಳಿತಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದು ಅದನ್ನು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ನಂತರ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಯುವತಿಯನ್ನು ಬಂಡೇಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಇನ್ನು ಬಾಲಕಿ ಅಪ್ರಾಪ್ತಳಾಗಿದ್ದು, ಅವರು ಸಮೂಹಿಕ ಅತ್ಯಾಚಾರ ಮಾಡುವ ವಿಡಿಯೋವನ್ನು ಕೂಡ ಮೊಬೈಲ್ನಲ್ಲಿ ರೆಕಾರ್ಟ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ, ಯುವತಿಗೆ ನಿನ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹಾಗೂ ಹಲ್ಲೆ ಮಾಡುವುದಾಗಿ ಬೆದರಿಸಿ ಅಲ್ಲಿಂದ ಕಳಿಸಿದ್ದಾರೆ. ತೀವ್ರ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ವಿಚಾರಣೆ ಮಾಡಿದಾದ ಸಾಮೂಹಿಕ ಅತ್ಯಾಚಾರ ಆಗಿರುವುದನ್ನು ಹೇಳಿದ್ದಾಳೆ. ಕೂಡಲೇ, ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು ಶೋಧ ಕಾರ್ಯ ಆರಂಭಿಸಿದ್ದಾರೆ. ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಸಂಬಂಧ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬಾತನನ್ನ ಪೊಲೀಸರು ಬಂಧಿಸಿ ಜೈಲಿಹಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…