ತುಮಕೂರು: ತುಮಕೂರಿನ ಜಾತ್ರೆಗೆ ಸ್ನೇಹಿತನೊಂದಿಗೆ ಬಂದಿದ್ದ ಬಾಲಕಿ ನಂತರ ಪಕ್ಕದಲ್ಲಿಯೇ ಇದ್ದ ಬೆಟ್ಟದ ಬಳಿಗೆ ಮಾತನಾಡಲು ಹೋಗಿದ್ದಾರೆ. ಇವರನ್ನು ಹಿಂಬಾಲಿಸಿಕೊಂಡು ಹೋದ ಕಿಡಿಗೇಡಿಗಳು ಅವರು ಕುಳಿತಿದ್ದ ವಿಡಿಯೋವನ್ನು ಮಾಡಿ ತೋರಿಸಿ ಬೆದರಿಸಿದ್ದಾರೆ. ನಂತರ, ಬಾಲಕಿಯನ್ನು ಎಳೆದೊಯ್ದು ಮನೆಯೊಂದರಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿದ್ದಾರೆ.
ಜಾತ್ರೆಗೆ ಸಾವಿರಾರು ಜನರು ಆಗಮಿಸುತ್ತಾರೆ. ಈ ವೇಳೆ ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರಿಗೆ ಬೆಟ್ಟದ ಕಡೆಗೆ ಹೋಗದಂತೆ ಪೊಲೀಸು ನಿಗಾವಹಿಸಿರುತ್ತಾರೆ. ಆದರೂ, ಪೊಲೀಸರ ಕಣ್ಣು ತಪ್ಪಿಸಿ ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗೆ, ತನ್ನ ಬಾಯ್ಫ್ರೆಂಡ್ನೊಂದಿಗೆ ಜಾತ್ರೆಗೆ ಬಂದ ಬಾಲಕಿಯೂ ಕೂಡ ಬೆಟ್ಟದ ಬಳಿ ಹೋಗಿ ಮಾತನಾಡಲು ಕುಳಿತಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದು ಅದನ್ನು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ನಂತರ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಯುವತಿಯನ್ನು ಬಂಡೇಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಇನ್ನು ಬಾಲಕಿ ಅಪ್ರಾಪ್ತಳಾಗಿದ್ದು, ಅವರು ಸಮೂಹಿಕ ಅತ್ಯಾಚಾರ ಮಾಡುವ ವಿಡಿಯೋವನ್ನು ಕೂಡ ಮೊಬೈಲ್ನಲ್ಲಿ ರೆಕಾರ್ಟ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ, ಯುವತಿಗೆ ನಿನ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹಾಗೂ ಹಲ್ಲೆ ಮಾಡುವುದಾಗಿ ಬೆದರಿಸಿ ಅಲ್ಲಿಂದ ಕಳಿಸಿದ್ದಾರೆ. ತೀವ್ರ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ವಿಚಾರಣೆ ಮಾಡಿದಾದ ಸಾಮೂಹಿಕ ಅತ್ಯಾಚಾರ ಆಗಿರುವುದನ್ನು ಹೇಳಿದ್ದಾಳೆ. ಕೂಡಲೇ, ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು ಶೋಧ ಕಾರ್ಯ ಆರಂಭಿಸಿದ್ದಾರೆ. ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಸಂಬಂಧ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬಾತನನ್ನ ಪೊಲೀಸರು ಬಂಧಿಸಿ ಜೈಲಿಹಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…