Featured

ಸ್ನೇಹಿತನ ಶಸ್ತ್ರಚಿಕಿತ್ಸೆಗಾಗಿ ತನ್ನ ಜಮೀನನ್ನೇ ಮಾರಿದ ಗೆಳೆಯ..

ಬೆಳಗಾವಿ: ಇವರಿಬ್ಬರ 35 ವರ್ಷಗಳ ಸ್ನೇಹಕ್ಕೆ ಯಾವುದೂ ಅಡ್ಡ ಬರಲಿಲ್ಲ,  ಬೆಳಗಾವಿಯ ವ್ಯಕ್ತಿಯೊಬ್ಬ  ತನ್ನ ಸ್ನೇಹಿತನ ಲಿವರ್ ಪ್ಲಾಂಟೇಶನ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಿ ಹಣ ನೀಡಿದ್ದಾನೆ.

ಬೆಳಗಾವಿಯ ಸಂದೀಪ್ ಮುಚಂಡಿ ಯಕೃತ್ತಿನ ಸಂಬಂಧದ ಕಾಯಿಲೆಯಿಂದ ಬಳಲುತ್ತಿದ್ದರು, ಹೀಗಾಗಿ ಶಸ್ತ್ರಚಿಕಿತ್ಸೆಗೊಳಪಡುವಂತೆ ಸಲಹೆ ನೀಡಿದ್ದರು. ಆದರೆ ತುಂಬಾ ಬಡತನದ ಹಿನ್ನೆಲೆಯಿಂದ ಬಂದ ಸಂದೀಪ್ ಅಷ್ಟು ಹಣ ಹೊಂದಿಸಲು ಸಾಧ್ಯವಾಗಲಿಲ್ಲ.

ಆದರೆ ಆತನಿಗೆ ಯಾರು ಹಣ ನೀಡಲು ಬರಲಿಲ್ಲ, ಆದರೆ ಈ ವೇಳೆ ಸಂದೀಪ್ ಸ್ನೇಹಿತ  ವಿಷ್ಣುಗಲ್ಲಿಯ ಬಾಬುಲಾಲ್ ಪಠಾಣ್ ತನ್ನ 1.5 ಗುಂಟೆ ಜಮೀನನ್ನು 22 ಲಕ್ಷ ಹಣಕ್ಕೆ ಮಾರಿ ಹಣ ನೀಡಿದ್ದಾನೆ, ಉಳಿದ 6 ಲಕ್ಷ ಹಣವನ್ನು ಕುಟುಂಬದ ಸದಸ್ಯರು ಅಡ್ಜಸ್ಟ್  ಮಾಡಿದ್ದಾರೆ, ಕಳೆದ ತಿಂಗಳು ಮುಂಬಯಿಯ ಅಪೊಲೋ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಸರ್ಜರಿ ಮಾಡಿಸಿದ್ದಾರೆ.
ಸಂದೀಪ್ ಗೆ ಸಹಾಯ ಮಾಡಲು ಯಾವ ಮಟ್ಟಕ್ಕೆ ನಾನು ಹೋಗಲು ಸಿದ್ಧ, ಆತನನ್ನು ರಕ್ಷಿಸುವುದಷ್ಟೇ ನನ್ನ ಗುರಿಯಾಗಿತ್ತು, ತನ್ನ ಸ್ನೇಹಿತನಿಗಾಗಿ ಕಿಡ್ನಿ ದಾನ ಮಾಡುವಂತೆ ಮಗನಿಗೆ ಕೇಳಬೇಕೆಂಬ ಯೋಚನೆ ಬಂದಿತ್ತು ಆದರೆ ವೈದ್ಯರು ಅಂಗ ಮ್ಯಾಚ್ ಆಗುವುದಿಲ್ಲ ಎಂದು ವೈದ್ಯರು ಹೇಳಿದಾಗ ಅದರ ಬದಲು ಹಣ ಹೊಂದಿಸಿದೆ ಎಂದು ಹೇಳಿದ್ದಾರೆ.
ವಿಷ್ಣುಗಲ್ಲಿಯ ನಿವಾಸಿ ಬಾಬುಲಾಲ್ ಪಠಾಣ್ ಮುಂಬಯಿಯ ವೈದ್ಯರ ಜೊತೆ  ಮಾತನಾಡಿ, ಹಣ ಹೊಂದಿಸಲು ಹೋರಾಟ ಮಾಡಿರುವುದಾಗಿ ಹೇಳಿದೆ, ಆಗ ವೈದ್ಯರು ಬಿಲ್ ನಲ್ಲಿ 4 ಲಕ್ಷ ಹಣ ಕಡಿಮೆ ಮಾಡಿದರು ಎಂದು ತಿಳಿಸಿದರು.
ಬಾಬುಲಾಲ್  ಸಂದೀಪ್ ಮತ್ತು ಅವರ ಕುಟುಂಬದವರಿಗಾಗಿ ಸಂಪೂರ್ಣ ಬೆಂಬಲ ನೀಡಿದ್ದು, ಹಣ ಹೊಂದಿಸಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
ಸಂದೀಪ್ ಈಗ ಚೇತರಿಸಿಕೊಳ್ಳುತ್ತಿದ್ದು, ಅವರ ಪರಿಸ್ಥಿತಿ ನಾರ್ಮಲ್ ಆಗಿದೆ, ಸದ್ಯ ಸಂದೀಪ್ ಮುಂಬಯಿಯಲ್ಲಿದ್ದು, ನಿಯಮಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

12 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

14 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

14 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

14 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago