ಚಿಕ್ಕಮಗಳೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಸ್ನೇಹಿತರ ಜೊತೆ ಡ್ರಿಂಕ್ಸ್ ಮಾಡಿದ 13 ಬಾಲಕ ಬಳಿಕ ಈ ವಿಷಯ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕ 13 ವರ್ಷದ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಮೇಲ್ಪಾಲ್ ಗ್ರಾಮದಲ್ಲಿ ಅದೇ ಗ್ರಾಮಸ್ಥರ ಮದುವೆ ಕಾರ್ಯಕ್ರಮವಿತ್ತು. ಮದುವೆಗೆ ಬಾಲಕ ಸೇರಿ ಪೋಷಕರು ಹೋಗಿದ್ದರು.
ಈ ವೇಳೆ ಮದುವೆಯಲ್ಲಿ ಸ್ನೇಹಿತರ ಜೊತೆ ಸೇರಿ ಮದ್ಯ ಸೇವಿಸಿದ್ದಾನೆ. ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನ ಗಮನಿಸಿದ ಪೋಷಕರು ಕೂಡಲೇ ಆತನನ್ನ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲೇ ಬಾಲಕ ಶರಣ್ ಸಾವನ್ನಪ್ಪಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…