Featured

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ – vishwanews24

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ

ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ  ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೊಸಳೆಹೊಸಳ್ಳಿ  ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ.

ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು.

ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ ಆಗಲಿದೆ ಎಂದು ಭಾವಿಸಿ ಇನ್ಸ್ಟಾದಿಂದ ವೀಡಿಯೋ ಡಿಲೀಟ್ ಮಾಡಿಸಲು ಪವನ್ ಸಾಕಷ್ಟು ಪ್ರಯತ್ನ ಪಟ್ಟಿದ್ದ.

ಆದರೆ ಅದು ಸಾಧ್ಯವಾಗದೇ ಇದ್ದಾಗ, ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿದ್ದ ಪವನ್, ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತಿ ಕಳೆದುಕೊಂಡು ಗಾರೆ ಕೆಲಸ ಮಾಡಿ ಮಗನನ್ನು ಸಾಕುತ್ತಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಪವನ್ ಸಾವಿಗೆ ಕಾರಣಳಾದ ಅಪರಿಚಿತ ಯುವತಿಯನ್ನು ಬಂಧಿಸುವಂತೆ ಪವನ್ ಕುಟುಂಬಸ್ಥರು ಆಗ್ರಹಿಸಿದ್ದು, ಮುಂದೆ ಯಾರಿಗೂ ಇಂತಹ ಮಾನಹಾನಿ ಆಗಬಾರದು. ಇದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago