Featured

ಸ್ಪೀಕರ್ ಆಗಿ ಯು.ಟಿ ಖಾದರ್ – ಇಂದು ನಾಮಪತ್ರ ಸಲ್ಲಿಕೆ – Vishwanews24

ಸ್ಪೀಕರ್ ಆಗಿ ಯು.ಟಿ ಖಾದರ್ – ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.

ಇದೀಗ ಅಚ್ಚರಿ ಎಂಬಂತೆ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಮೊದಲ ಎರಡು ವರ್ಷಗಳಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಖಾದರ್ ಕೂಡಾ ತನ್ನ ಒಪ್ಪಿಗೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಆದರೆ ಮಂತ್ರಿ ಹುದ್ದೆಗೆ ಪಟ್ಟು ಹಿಡಿದು ಅವರ್ಯಾರು ಒಪ್ಪದ ಕಾರಣ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರ ಖಾದರ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಸಚಿವರಾಗಿ ಅನುಭವಾಗಿಯುರವ ಇವರು 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯ ನಿರ್ವಹಿಸಿ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago