ಬೆಂಗಳೂರು: ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕ ಅಂಗೀಕಾರವಾದ ನಂತರ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸೋಮವಾರ ವಿಧಾನಸಭೆ ಕಲಾಪದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸಮತ ಪ್ರಸ್ತಾಪವನ್ನು ಮಂಡಿಸಿದರು. ಧ್ವನಿಮತದ ಮೂಲಕ ಬಿಎಸ್ವೈ ವಿಶ್ವಾಸ ಮತವನ್ನು ಗೆದ್ದರು.
ಆನಂತರ ಸಿಎಂ ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು. ಹೆಚ್ಚಿನ ಚರ್ಚೆ ಇಲ್ಲದೆ ಆ ವಿಧೇಯಕವು ಅಂಗೀಕಾರಗೊಂಡಿತು. ಇದಾದ ಬಳಿಕ ವಿದಾಯ ಭಾಷಣ ಆರಂಭಿಸಿದ ರಮೇಶ್ ಕುಮಾರ್ ತಾವು ರಾಜೀನಾಮೆ ನೀಡುವ ತೀರ್ಮಾನವನ್ನು ಪ್ರಕಟಿಸಿದರು.
ನನ್ನ ಸಿಬ್ಬಂದಿಗಳಿಗೆ, ನನ್ನ ಎಲ್ಲಾ ಕಾರ್ಯದರ್ಶಿಗಳಿಗೆ, ಡಿ ಗ್ರೂಪ್ ನೌಕರರಿಗೆ, ಕೃತಜ್ಞತೆಯನ್ನು ತಿಳಿಸುತ್ತಾ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದಾಗ, ಸೋನಿಯಾಗಾಂಧಿಯವರು ಕರೆಮಾಡಿ ತಾವು ಸ್ಪೀಕರ್ ಆಗುವಂತೆ ಸೂಚಿಸಿದ್ದರು. ಹೀಗಾಗಿ ಆ ಸ್ಥಾನವನ್ನು ಅಲಂಕರಿಸಿದೆ. ಅವರಿಗೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಮೀಡಿಯಾದವರಿಗೆ, ಒಂದು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಬದುಕಿನಲ್ಲಿ ಇರುವವ ವೈಯಕ್ತಿಕ ಜೀವನದ ಬಗ್ಗೆ ಸುದ್ದಿ ಮಾಡುವ ಮೊದಲು, ನಿಮ್ಮಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ. ಅಂತಹ ಕೆಲಸವನ್ನು ಮಾಡಬಾರದು ಎಂದು ರಮೇಶ್ ಕುಮಾರ್ ಮನವಿ ಮಾಡಿಕೊಂಡರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…