ಬೆಂಗಳೂರು: ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕ ಅಂಗೀಕಾರವಾದ ನಂತರ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸೋಮವಾರ ವಿಧಾನಸಭೆ ಕಲಾಪದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸಮತ ಪ್ರಸ್ತಾಪವನ್ನು ಮಂಡಿಸಿದರು. ಧ್ವನಿಮತದ ಮೂಲಕ ಬಿಎಸ್ವೈ ವಿಶ್ವಾಸ ಮತವನ್ನು ಗೆದ್ದರು.
ಆನಂತರ ಸಿಎಂ ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು. ಹೆಚ್ಚಿನ ಚರ್ಚೆ ಇಲ್ಲದೆ ಆ ವಿಧೇಯಕವು ಅಂಗೀಕಾರಗೊಂಡಿತು. ಇದಾದ ಬಳಿಕ ವಿದಾಯ ಭಾಷಣ ಆರಂಭಿಸಿದ ರಮೇಶ್ ಕುಮಾರ್ ತಾವು ರಾಜೀನಾಮೆ ನೀಡುವ ತೀರ್ಮಾನವನ್ನು ಪ್ರಕಟಿಸಿದರು.
ನನ್ನ ಸಿಬ್ಬಂದಿಗಳಿಗೆ, ನನ್ನ ಎಲ್ಲಾ ಕಾರ್ಯದರ್ಶಿಗಳಿಗೆ, ಡಿ ಗ್ರೂಪ್ ನೌಕರರಿಗೆ, ಕೃತಜ್ಞತೆಯನ್ನು ತಿಳಿಸುತ್ತಾ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದಾಗ, ಸೋನಿಯಾಗಾಂಧಿಯವರು ಕರೆಮಾಡಿ ತಾವು ಸ್ಪೀಕರ್ ಆಗುವಂತೆ ಸೂಚಿಸಿದ್ದರು. ಹೀಗಾಗಿ ಆ ಸ್ಥಾನವನ್ನು ಅಲಂಕರಿಸಿದೆ. ಅವರಿಗೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಮೀಡಿಯಾದವರಿಗೆ, ಒಂದು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಬದುಕಿನಲ್ಲಿ ಇರುವವ ವೈಯಕ್ತಿಕ ಜೀವನದ ಬಗ್ಗೆ ಸುದ್ದಿ ಮಾಡುವ ಮೊದಲು, ನಿಮ್ಮಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ. ಅಂತಹ ಕೆಲಸವನ್ನು ಮಾಡಬಾರದು ಎಂದು ರಮೇಶ್ ಕುಮಾರ್ ಮನವಿ ಮಾಡಿಕೊಂಡರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…