Featured

ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ – vishwanews24

ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಉಡುಪಿ: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್‌ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲವು ವಾಹನಗಳಿಗೆ ದಂಡ ವಿಧಿಸಲಾಗಿದೆ.

ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಮರಳು ಸಾಗಾಟದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿ ಸುವ ಬಗ್ಗೆ ಗಡುವು ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ.

ಅದರಂತೆ ಬುಧವಾರ ಜಿಲ್ಲೆಯ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಟ್ಟು 1100 ಬಸ್‌ಗಳನ್ನು ಪರಿಶೀಲನೆ ನಡೆಸಿದರು. ಇದರಲ್ಲಿ ಬಾಗಿಲು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 108 ಬಸ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಅದೇ ರೀತಿ ಮರಳು, ಕಲ್ಲು, ಮಣ್ಣು ಸಾಗಾಟ ಮಾಡುವ ಒಟ್ಟು 1352 ವಾಹನಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಓವರ್ ಲೋಡ್, ವೇಗ ನಿಯಂತ್ರಕಗಳನ್ನು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 56 ವಾಹನಗಳಿಗೆ ದಂಡ ವಿಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜ.29ರಂದು ಮಧ್ಯಾಹ್ನ 3 ಗಂಟೆಗೆ ನಗರ ಬಸ್ ಮಾಲೀಕರೊಂದಿಗೆ ಬಸ್ ಸಮಯದ ವಿಚಾರ ಹಾಗೂ ಇತರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆದಿದ್ದಾರೆ.

ರಸ್ತೆ ಸಾರಿಗೆ ಪ್ರಾಧಿಕಾರ ಹಾಗೂ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಯಿಂದ ತೆಗೆದುಕೊಳ್ಳಲಾದ ತೀರ್ಮಾನ ಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬಸ್ ಹಾಗೂ ಲಾರಿಗಳ ವಿರುದ್ಧ ಈ ರೀತಿಯ ಕಾರ್ಯಾಚರಣೆಗಳನ್ನು ಹಂತ ಹಂತವಾಗಿ ಮುಂದುವರಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago