ಬೆಂಗಳೂರು : ಸ್ಮಶಾನ ಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸ್ಮಶಾನ ಕಾರ್ಮಿಕರ ಖಾಯಂ ನೇಮಕಾತಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಇಂದು ಸ್ಮಶಾನ ಕಾರ್ಮಿಕರ ಜೊತೆಗೆ ಉಪಹಾರ ಸೇವಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸ್ಮಶಾನ ಕಾರ್ಮಿಕರನ್ನು ಇನ್ಮುಂದೆ ಸತ್ಯಹರಿಶ್ಚಂದ್ರ ಬಳಗ ಎಂದು ಕರೆಯಬೇಕು ಎಂದು ಸೂಚನೆ ನೀಡಿದ್ದಾರೆ.
ನಾನು ಒಂದು ದಿನ ಕಾರ್ಮಿಕರ ಸಮಸ್ಯೆ ಕೇಳಿದ್ದೇನೆ. ಸಮಸ್ಯೆ ಕೇಳಿ ಸೌಲಭ್ಯ ಕೊಡುವ ನಿರ್ಣಯ ಮಾಡಿದ್ದೇನೆ. ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಇಷ್ಟು ವರ್ಷ ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಯಾರೂ ಕೇಳಲಿಲ್ಲ. ರಾಜ್ಯ ಸರ್ಕಾರವಾಗಲಿ, ಅಧಿಕಾರಿಗಳೇ ಆಗಲಿ ತಿರುಗಿ ನೋಡಲಿಲ್ಲ. ಇದು ಬಡವರ ಪರ ಕಳಕಳಿ ಇರುವಂತಹ ಸರ್ಕಾರ, ಕಾರ್ಮಿಕರು ಕೊಟ್ಟಿರುವಂತ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಾನು ದೇವರ ಮನೆಯಲ್ಲೇ ಇಡುತ್ತೇನೆ ಎಂದರು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…