ಬೆಂಗಳೂರು : ಸ್ಮಶಾನ ಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸ್ಮಶಾನ ಕಾರ್ಮಿಕರ ಖಾಯಂ ನೇಮಕಾತಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಇಂದು ಸ್ಮಶಾನ ಕಾರ್ಮಿಕರ ಜೊತೆಗೆ ಉಪಹಾರ ಸೇವಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸ್ಮಶಾನ ಕಾರ್ಮಿಕರನ್ನು ಇನ್ಮುಂದೆ ಸತ್ಯಹರಿಶ್ಚಂದ್ರ ಬಳಗ ಎಂದು ಕರೆಯಬೇಕು ಎಂದು ಸೂಚನೆ ನೀಡಿದ್ದಾರೆ.
ನಾನು ಒಂದು ದಿನ ಕಾರ್ಮಿಕರ ಸಮಸ್ಯೆ ಕೇಳಿದ್ದೇನೆ. ಸಮಸ್ಯೆ ಕೇಳಿ ಸೌಲಭ್ಯ ಕೊಡುವ ನಿರ್ಣಯ ಮಾಡಿದ್ದೇನೆ. ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಇಷ್ಟು ವರ್ಷ ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಯಾರೂ ಕೇಳಲಿಲ್ಲ. ರಾಜ್ಯ ಸರ್ಕಾರವಾಗಲಿ, ಅಧಿಕಾರಿಗಳೇ ಆಗಲಿ ತಿರುಗಿ ನೋಡಲಿಲ್ಲ. ಇದು ಬಡವರ ಪರ ಕಳಕಳಿ ಇರುವಂತಹ ಸರ್ಕಾರ, ಕಾರ್ಮಿಕರು ಕೊಟ್ಟಿರುವಂತ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಾನು ದೇವರ ಮನೆಯಲ್ಲೇ ಇಡುತ್ತೇನೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…