ಬೆಂಗಳೂರು : ಸ್ಮಶಾನ ಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸ್ಮಶಾನ ಕಾರ್ಮಿಕರ ಖಾಯಂ ನೇಮಕಾತಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಇಂದು ಸ್ಮಶಾನ ಕಾರ್ಮಿಕರ ಜೊತೆಗೆ ಉಪಹಾರ ಸೇವಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸ್ಮಶಾನ ಕಾರ್ಮಿಕರನ್ನು ಇನ್ಮುಂದೆ ಸತ್ಯಹರಿಶ್ಚಂದ್ರ ಬಳಗ ಎಂದು ಕರೆಯಬೇಕು ಎಂದು ಸೂಚನೆ ನೀಡಿದ್ದಾರೆ.
ನಾನು ಒಂದು ದಿನ ಕಾರ್ಮಿಕರ ಸಮಸ್ಯೆ ಕೇಳಿದ್ದೇನೆ. ಸಮಸ್ಯೆ ಕೇಳಿ ಸೌಲಭ್ಯ ಕೊಡುವ ನಿರ್ಣಯ ಮಾಡಿದ್ದೇನೆ. ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಇಷ್ಟು ವರ್ಷ ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಯಾರೂ ಕೇಳಲಿಲ್ಲ. ರಾಜ್ಯ ಸರ್ಕಾರವಾಗಲಿ, ಅಧಿಕಾರಿಗಳೇ ಆಗಲಿ ತಿರುಗಿ ನೋಡಲಿಲ್ಲ. ಇದು ಬಡವರ ಪರ ಕಳಕಳಿ ಇರುವಂತಹ ಸರ್ಕಾರ, ಕಾರ್ಮಿಕರು ಕೊಟ್ಟಿರುವಂತ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಾನು ದೇವರ ಮನೆಯಲ್ಲೇ ಇಡುತ್ತೇನೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…