ಉಡುಪಿ : ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸ್ಮಾರ್ಟ್ ಸಿಟಿಯ ಅನುದಾನವನ್ನು ಕಸಾಯಿಖಾನೆಗೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡದಿದ್ದಲ್ಲಿ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ಸುನಿಲ್ ಕುಮಾರ್ ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿರುವ ಅನುದಾನವನ್ನು ಅಭಿವೃದ್ಧಿಗೆ ಕಾರ್ಯಗಳಿಗೆ ಬಳಸಬೇಕಾಗಿತ್ತು ಆದರೆ ಸಚಿವ ಖಾದರ್ ಕಸಾಯಿಖಾನೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಇದಕ್ಕೆಸಚಿವ ಯು.ಟಿ ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ 15 ಕೋಟಿ ಅನುದಾನವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ, ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ, ಇದರ ವಿರುದ್ದ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಸಚಿವ ಖಾದರ್ ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು, ಅಲ್ಲದೆ ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ ಎಂದರು.
ಸಚಿವ ಯು.ಟಿ ಖಾದರ್ ಗೆ ಕಸಾಯಿಖಾನೆಗ ಬಗ್ಗೆ ಆಸಕ್ತಿ ಜಾಸ್ತಿ ಇದ್ದು, ಸ್ಮಾರ್ಟ್ ಸಿಟಿ ಬಗ್ಗೆ ಅವರಿಗೆ ಆಸಕ್ತಿಯಿಲ್ಲ ಎಂದರು. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ರಾಜ್ಯ ಸರಕಾರಕ್ಕೆ ಕಸಾಯಿಖಾನೆ ಮುಚ್ಚುವ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…