Featured

ಸ್ಮಾರ್ಟ್ ಸಿಟಿಯ ಅನುದಾನ ಕಸಾಯಿಖಾನೆಗೆ ; ಸಚಿವ ಖಾದರ್ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಉಡುಪಿ : ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸ್ಮಾರ್ಟ್ ಸಿಟಿಯ ಅನುದಾನವನ್ನು ಕಸಾಯಿಖಾನೆಗೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡದಿದ್ದಲ್ಲಿ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.

ಕಾರ್ಕಳದಲ್ಲಿ ಮಾತನಾಡಿದ ಅವರು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ಸುನಿಲ್ ಕುಮಾರ್ ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿರುವ ಅನುದಾನವನ್ನು ಅಭಿವೃದ್ಧಿಗೆ ಕಾರ್ಯಗಳಿಗೆ ಬಳಸಬೇಕಾಗಿತ್ತು ಆದರೆ ಸಚಿವ ಖಾದರ್ ಕಸಾಯಿಖಾನೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಇದಕ್ಕೆಸಚಿವ ಯು.ಟಿ ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ 15 ಕೋಟಿ ಅನುದಾನವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ, ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ, ಇದರ ವಿರುದ್ದ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸಚಿವ ಖಾದರ್ ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು, ಅಲ್ಲದೆ ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ ಎಂದರು.

ಸಚಿವ ಯು.ಟಿ ಖಾದರ್ ಗೆ ಕಸಾಯಿಖಾನೆಗ ಬಗ್ಗೆ ಆಸಕ್ತಿ ಜಾಸ್ತಿ ಇದ್ದು, ಸ್ಮಾರ್ಟ್ ಸಿಟಿ ಬಗ್ಗೆ ಅವರಿಗೆ ಆಸಕ್ತಿಯಿಲ್ಲ ಎಂದರು. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ರಾಜ್ಯ ಸರಕಾರಕ್ಕೆ ಕಸಾಯಿಖಾನೆ ಮುಚ್ಚುವ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

 

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

31 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

39 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

54 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

1 hour ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago