ಉಡುಪಿ : ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸ್ಮಾರ್ಟ್ ಸಿಟಿಯ ಅನುದಾನವನ್ನು ಕಸಾಯಿಖಾನೆಗೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡದಿದ್ದಲ್ಲಿ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ಸುನಿಲ್ ಕುಮಾರ್ ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿರುವ ಅನುದಾನವನ್ನು ಅಭಿವೃದ್ಧಿಗೆ ಕಾರ್ಯಗಳಿಗೆ ಬಳಸಬೇಕಾಗಿತ್ತು ಆದರೆ ಸಚಿವ ಖಾದರ್ ಕಸಾಯಿಖಾನೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಇದಕ್ಕೆಸಚಿವ ಯು.ಟಿ ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ 15 ಕೋಟಿ ಅನುದಾನವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ, ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ, ಇದರ ವಿರುದ್ದ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಸಚಿವ ಖಾದರ್ ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು, ಅಲ್ಲದೆ ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ ಎಂದರು.
ಸಚಿವ ಯು.ಟಿ ಖಾದರ್ ಗೆ ಕಸಾಯಿಖಾನೆಗ ಬಗ್ಗೆ ಆಸಕ್ತಿ ಜಾಸ್ತಿ ಇದ್ದು, ಸ್ಮಾರ್ಟ್ ಸಿಟಿ ಬಗ್ಗೆ ಅವರಿಗೆ ಆಸಕ್ತಿಯಿಲ್ಲ ಎಂದರು. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ರಾಜ್ಯ ಸರಕಾರಕ್ಕೆ ಕಸಾಯಿಖಾನೆ ಮುಚ್ಚುವ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…