Featured

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ : ವಿಹಿಂಪ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ : ವಿಹಿಂಪ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: ನಗರದಲ್ಲಿಬಿಜೆಪಿ ಆಡಳಿತದ ಮಹಾ ನಗರ ಪಾಲಿಕೆಯಿಂದಲೇ ಬೀಫ್ ಸ್ಟಾಲ್ ನಿರ್ಮಾಣವಾಗುತ್ತಿರುವುದರ ವಿರುದ್ದ ವಿಶ್ವಹಿಂದೂ ಪರಿಷತ್ ಕೆಂಡ ಕಾರಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಮಂಗಳೂರು ಪಾಲಿಕೆಯಲ್ಲೂ ಬಿಜೆಪಿ ಆಡಳಿತವಿದೆ. ಜೊತೆಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡ ಇದೆ. ಆದರೂ ಭೀಫ್ ಸ್ಟಾಲ್ ನಿರ್ಮಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು ಈ ಯೋಜನೆ ಕೈಬಿಡದೇ ಇದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ವಿಹಿಂಪ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಉಡುಪಿ : ಸಿದ್ದರಾಮಯ್ಯ ಅವರು ತಾವೇ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆಯಲ್ಲಿದ್ದಾರೆ : ಸಿಎಂ ಬೊಮ್ಮಾಯಿ – Vishwanews24

ಏನಿದು ಯೋಜನೆ?

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ಮಾಡಿಕೊಡಲಾಗಿದೆ. 9 ಬೀಫ್ ಸ್ಟಾಲ್ ನಿರ್ಮಾಣದ ನೀಲ ನಕಾಶೆ ಸಿದ್ದಗೊಂಡಿದ್ದು.114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣ ಅಗುತ್ತಿದೆ.

ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರಿಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ನಕ್ಷೆ ಸಿದ್ಧ ಅಗಿದೆ.

18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿರುವ ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ, ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರೋ ನೂತನ ಮಾರುಕಟ್ಟೆ ಇದಾಗಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ ನಡೆಯಲಿದ್ದು ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ಪಾಲಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಅಕ್ರೋಶ ಹೊರ ಹಾಕಿದೆ.

ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಭವಿಷ್ಯ ನಿಧಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹ : ಸಿಎಂ ಗೆ ಮನವಿ – Vishwanews24

ತರಕಾರಿ, ಕೋಳಿ ಅಂಗಡಿಗಳ ಜೊತೆಗೆ ಬೀಫ್ ಸ್ಟಾಲ್ ಗೆ ಅವಕಾಶ ನೀಡಲಾಗಿದೆ. ಜೊತೆಗೆ ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕವೂ ಬಿಜೆಪಿಯಿಂದ ಬೀಫ್ ಸ್ಟಾಲ್ ಗೆ ಅವಕಾಶ ನೀಡಿರುವುದು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಬೀಫ್ ಸ್ಟಾಲ್ ಗೆ ಅವಕಾಶ ಸರಿಯಲ್ಲ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಮಂಡಳಿ ತಕ್ಷಣ ಈ ಯೋಜನೆ ಕೈ ಬಿಡಬೇಕು. ಕೈ ಬಿಡದೇ ಇದ್ದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.\

 

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

14 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

14 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

14 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

14 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

16 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago