ಬೆಂಗಳೂರು: ವಿವಿಧ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ಸ್ಯಾಂಟ್ರೋ ರವಿ ಕೇಸ್ ಅನ್ನು, ಸಿಐಡಿಗೆ ವರ್ಗಾವಣೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಕುಖ್ಯಾತ ವಂಚಕ, ಅಕ್ರಮಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಲಿದೆ.
ಈ ಸಂಬಂಧ ಗೃಹ ಇಲಾಖೆಯ ಸಚಿವ ಅರಗ ಜ್ಞಾನೇಂದ್ರ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲೇ ಪ್ರಕರಣ ಸಂಬಂಧ ಬಂಧಿರುವಂತ ದೂರುಗಳ ಬಗ್ಗೆಯೂ ತನಿಖೆ ನಡೆಸುವಂತೆ ತಿಳಿಸಲಾಗಿದೆ.
ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಅಲ್ಲದೇ ಇಂದು ಜನವರಿ 25ರವರೆಗೆ ಅವರಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಮೈಸೂರು ಜಿಲ್ಲಾ ನ್ಯಾಯಾಲಯವು ಆದೇಶಿಸಿತ್ತು.
ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದ್ರೇ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂಬುದಾಗಿ ಹೇಳಿತ್ತು. ಈ ಬೆನ್ನಲ್ಲೇ ಗೃಹ ಇಲಾಖೆ ಸಚಿವರು ಸಿಐಡಿಗೆ ಪ್ರಕರಣ ವರ್ಗಾವಣೆ ನೀಡುವಂತೆ ನಿರ್ದೇಶಿಸಿದ್ದಾರೆ.
Join our Whatsapp group by clicking the below link 👇👇
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…