Featured

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ : ಇತ್ತೀಚೆಗೆ ಮೃತಪಟ್ಟ ನಟನ ಸಾವಿನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್‌ ಲಂಕೇಶ್‌ -Vishwanews24

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ : ಇತ್ತೀಚೆಗೆ ಮೃತಪಟ್ಟ ನಟನ ಸಾವಿನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್‌ ಲಂಕೇಶ್‌ -Vishwanews24

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್‌ ದಂಧೆ ಇರುವುದು ನನಗೆ ಗೊತ್ತು. ಇದರ ಜೊತೆಗೆ ರೇವ್‌ ಪಾರ್ಟಿ ನಡೆಯುತ್ತೆ, ಗಾಂಜಾ ಹೊಡೀತಾರೆ.ಎಂದು ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈಗಿನ ಯಂಗ್‌ ಹೀರೋಗಳು ಡ್ರಗ್‌ ಸೇವನೆ ಮಾಡಿ ಶೂಟಿಂಗ್‌ಗೆ ಬರುತ್ತಿದ್ದಾರೆ. ನಟಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್‌ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದಾರೆ. ಬರೀ ಡ್ರಗ್‌ ದಂಧೆ ಮಾತ್ರವಲ್ಲ, ಇಲ್ಲಿ ರೇವ್‌ ಪಾರ್ಟಿ ಪಾರ್ಟಿಗಳನ್ನೂ ಮಾಡುತ್ತಾರೆ. ಗಾಂಜಾ ಸೇವನೆಯೂ ಕಾಮನ್‌ ಆಗ್ತಿದೆ. ಈ ಆಘಾತಕಾರಿ ವಿಚಾರ ಹಿರಿಯ ನಟರಿಗೂ ತಿಳಿದಿದೆ. ಅವರಿಗೆ ಈ ಬೆಳವಣಿಗೆ ಬಗ್ಗೆ ಬೇಸರವಿದೆ. ಇದನ್ನವರು ನನ್ನ ಜೊತೆಗೆ ಚರ್ಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಈ ವರ್ಷ ಯುವ ನಟ ತೀರಿಹೋದಾಗ ಇಡೀ ರಾಜ್ಯಕ್ಕೆ ನೋವಾಗಿತ್ತು. ಆದ್ರೆ, ಮೃತದೇಹದ ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು. ಈ ಬಗ್ಗೆ ಒಂದೇ ಒಂದು ತನಿಖೆಯೂ ನಡೆಯಲಿಲ್ಲ ಯಾಕೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.

ಹಾಗಂತ, ನನಗೆ ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಬಾಲಿವುಡ್‌ನಲ್ಲಿ ಸುಶಾಂತ್‌ ಸಿಂಗ್‌ ಮರಣೋತ್ತರ ಪರೀಕ್ಷೆಯದ್ದು ದೊಡ್ಡ ಚರ್ಚೆಯಾಗುತ್ತಿದೆ. ಅದೇ ರೀತಿ ಆ ನಟ ಮೃತಪಟ್ಟಗಲೂ ಮರಣೋತ್ತರ ಪರೀಕ್ಷೆ ನಡೆಸಬೇಕಿತ್ತು. ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ. ಇದರಲ್ಲಿ 18 ಜನ ಏಜೆಂಟ್​ಗಳೇ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಬ್ಯಾಕ್​ಗ್ರೌಂಡ್​, ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್ ನಟಿಯರಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ನಮ್ಮ ಪೊಲೀಸರ ಬಳಿ ಎಲ್ಲ ಮಾಹಿತಿ, ದಾಖಲೆಗಳು ಇವೆ. ಪೊಲೀಸರು ಮನಸ್ಸು ಮಾಡಿದರೆ ಈ ಕ್ಷಣವೇ ಅವರನ್ನು ಬಂಧಿಸಬಹುದು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago