Featured

ಸ್ಯಾಂಡಲ್‍ವುಡ್ ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ – Vishwanews24

ಸ್ಯಾಂಡಲ್‍ವುಡ್ ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ – Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಾಘವೆಂದ್ರ ರಾಜ್‍ಕುಮಾರ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ದೊರೆತಿದೆ.

ಈ ಕುರಿತಂತೆ ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪ್ರಶಸ್ತಿ ಸ್ವೀಕರಿಸಿದ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ಚಂದನವನದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಅವರ ಜರ್ನಿಯನ್ನು ವಿವರಿಸಲಾಗಿದೆ.

ವೀಡಿಯೋ ಜೊತೆಗೆ, ನಿನ್ನೆ ಬೆಂಗಳೂರಿನಲ್ಲಿ ನಡೆದ ಇನೊವೆಟೀವ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ‘ದಾದಾ ಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್’ ವತಿಯಿಂದ ‘ಜೀವಮಾನ ಸಾಧನೆ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಾರೆ. ಈ ಪ್ರಶಸ್ತಿಯು ಅಪ್ಪಾಜಿ, ಅಮ್ಮ, ಕುಟುಂಬ ವರ್ಗ ಹಾಗೂ ನನ್ನೆಲ್ಲಾ ಅಭಿಮಾನಿ ದೇವರುಗಳಿಗೆ ಅರ್ಪಿಸುತ್ತಿದ್ದೇನೆ. ತುಂಬು ಹೃದಯದ ಧನ್ಯಾವಾದಗಳು ಎಂದು ಕಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ವರನಟ ಡಾ. ರಾಜ್‍ಕುಮಾರ್‌ರವರ ಪ್ರೀತಿಯ ಸುಪುತ್ರರಲ್ಲಿ ರಾಘವೇಂದ್ರ ರಾಜ್‍ಕುಮಾರ್ ಅವರು ದ್ವಿತೀಯ ಪುತ್ರರಾಗಿದ್ದಾರೆ. ರಾಘವೆಂದ್ರ ರಾಜ್‍ಕುಮಾರ್ ಅವರು ಭಾರತೀಯ ಚಿತ್ರರಂಗದ ನಟರಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಗಾಯಕ ಹಾಗೂ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. 1974ರಲ್ಲಿ ಡಾ. ರಾಜ್‍ಕುಮಾರ್ ಅಭಿನಯಿಸಿದ್ದ ಶ್ರೀನಿವಾಸ ಕಲ್ಯಾಣ ಸಿನಿಮಾದಲ್ಲಿ ಬಾಲನಟರಾಗಿ ನಟಿಸಿದ್ದರು. ನಂತರ ಚಿರಂಜೀವಿ ಸುಧಾಕರ ಸಿನಿಮಾದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದರು. ನಂತರ 1989ರಲ್ಲಿ ಬಿಡುಗಡೆಗೊಂಡ ನಂಜುಂಡಿ ಕಲ್ಯಾಣ ಸಿನಿಮಾ ರಾಘವೇಂದ್ರ ರಾಜ್‍ಕುಮಾರ್ ಅವರಿಗೆ ಬಹುದೊಡ್ಡ ಹಿಟ್ ಜೊತೆಗೆ ನೇಮ್ ಹಾಗೂ ಫ್ರೇಮ್ ತಂದುಕೊಟ್ಟಿತ್ತು.

ಇಲ್ಲಿಯವರೆಗೂ ರಾಘವೇಂದ್ರ ರಾಜ್‍ಕುಮಾರ್ ಅವರು 23 ಸಿನಿಮಾಗಳಲ್ಲಿ ಅಭಿನಯಿಸಿದ್ದು, ಸಾಕಷ್ಟು ಗೀತೆಗಳನ್ನು ಹಾಡಿದ್ದಾರೆ ಮತ್ತು 5 ಸಿನಿಮಾಗಳನ್ನು ನಿರ್ಮಿಸಿದ್ದಾರೆ. 2019ರಲ್ಲಿ ತೆರೆ ಕಂಡ ಅಮ್ಮನ ಮನೆ ಸಿನಿಮಾಕ್ಕಾಗಿ ರಾಘವೇಂದ್ರ ರಾಜ್‍ಕುಮಾರ್ ಅವರು ಉತ್ತಮ ನಟರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದ್ದಾರೆ.

ಇದೀಗ ರಾಘವೇಂದ್ರ ರಾಜ್‍ಕುಮಾರ್ ಅವರ ಸಾಧನೆ ಮೆಚ್ಚಿ ‘ದಾದಾ ಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್’ ವತಿ ಜೀವಮಾನ ಸಾಧನೆ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ.

 

Vishwa News 24

Recent Posts

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

12 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

26 minutes ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

30 minutes ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

43 minutes ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago