Featured

ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು -Vishwanews24

ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು -Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಕಳೆದ ಶುಕ್ರವಾರ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು.

ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸದ್ಯ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ.

ಆರ್ಯನ್ ಖಾನ್ ಬಂಧನ ಹಿನ್ನಲೆ : ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ -Vishwanews24

ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಜಿತ್ ಮಾಹಿತಿ ನಿಡಿದ್ದಾರೆ.

ಇದೇ ವೇಳೆ ಕಳೆದ ಕೆಲ ವರ್ಷಗಳಿಂದ ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಕಾರಣ ಹಣದ ಸಮಸ್ಯೆ ಇರುವುದು ನಿಜ. ಆದರೆ ಜನರಿಂದ ಹಣ ಪಡೆಯುವುದು ಇಷ್ಟವಿಲ್ಲ. ಫಿಲ್ಮ್ ಚೇಂಬರ್, ಸರ್ಕಾರ ಅಥವಾ ಇನ್ಶೂರೆನ್ಸ್ ಕಡೆಯಿಂದ ಹಣ ಕೊಟ್ಟರೆ ಚಿಕಿತ್ಸೆಗೆ ಸಹಾಯವಾಗುತ್ತದೆ ಎಂದು ಆಕಾಶ್ ಅಳಲು ತೋಡಿಕೊಂಡಿದ್ದಾರೆ.

Vishwa News 24

Recent Posts

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

21 minutes ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

2 days ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

2 days ago