ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿನ ಫೈರ್ ನಿಯೋಗ ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.
ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.
ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಚೇತನ್, ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಕಿರುಕುಳ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ವಿಸ್ತೃತವಾದ ಸಭೆ ನಡೆಸಲು ಮುಖ್ಯಮಂತ್ರಿ ಒಪ್ಪಿರುವುದಾಗಿ ತಿಳಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…